ಕೇರಳ ರಾಜ್ಯದಲ್ಲಿ ಫುಡ್ ಪಾಯ್ಸನಿಂಗ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪಾರ್ಸೆಲ್ ಕೊಡುವ ಆಹಾರದ ಪೊಟ್ಟಣಗಳ ಮೇಲೆ ಆಹಾರ ತಯಾರಾದ ದಿನ ಹಾಗೂ ಅಂತಿಮ ದಿನದ ಅಥವಾ ಸಮಯ ಪ್ರಕಟಿಸುವುದನ್ನು ಕಡ್ಡಾಯಗೊಳಿಸಿದೆ.
ಇದನ್ನು ನಮೂದಿಸಿಲ್ಲದ ಆಹಾರ ಪದಾರ್ಥಗಳನ್ನು ನಿಷೇಧಿಸಿದೆ. ಆಹಾರ ತಯಾರಿಸಿದ ದಿನಾಂಕ ಮತ್ತು ಸಮಯ, ಪ್ಯಾಕ್ ಮಾಡಲಾದ ದಿನಾಂಕ ಮತ್ತು ಸಮಯ, ಆಹಾರವನ್ನು ತಿನ್ನಬಹುದಾದ ಅಂತಿಮ ದಿನಾಂಕವನ್ನು ಪ್ರಕಟಿಸುವುದು ಕಡ್ಡಾಯ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
‘ಆಹಾರ ಸುರಕ್ಷತಾ ಮಾನದಂಡದ ನಿಯಮಗಳ ಪ್ರಕಾರ, ಬಿಸಿ ಆಹಾರಗಳನ್ನು ತಯಾರಿಸಿದ 2 ಗಂಟೆಗಳ ಒಳಗೆ ತಿನ್ನಬೇಕು. ಇಂತಹ ಆಹಾರಗಳನ್ನು ಸಾಗಿಸುವಾಗ 60 ಡಿಗ್ರಿ ಉಷ್ಣಾಂಶ ಇರುವಂತೆ ನೋಡಿಕೊಳ್ಳಬೇಕು. 2 ಗಂಟೆಗಳಿಗೂ ಹೆಚ್ಚು ಕಾಲ ಸಾಮಾನ್ಯ ತಾಪಮಾನಕ್ಕೆ ತೆರೆದಿಟ್ಟಆಹಾರ ಪದಾರ್ಥವನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಸುರಕ್ಷತಾ ಚೀಟಿಗಳು ಮತ್ತು ಎಕ್ಸ್ಪೈರಿ ದಿನಾಂಕಗಳಿಲ್ಲದ ಆಹಾರ ಪದಾರ್ಥಗಳ ಪೊಟ್ಟಣಗಳನ್ನು ನಿಷೇಧಿಸಲಾಗಿದೆ’ ಎಂದು ಅವರು ಹೇಳಿದ್ದಾರೆ .
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…