Advertisement
ಸುದ್ದಿಗಳು

ಪಾರ್ಸೆಲ್ ಕೊಡುವ ಆಹಾರದ ಪೊಟ್ಟಣದ ಮೇಲೆ ಮ್ಯಾನಿಫ್ಯಾಕ್ಚರ್ ಡೇಟ್ ಕಡ್ಡಾಯ

Share

ಕೇರಳ ರಾಜ್ಯ​ದಲ್ಲಿ ಫುಡ್‌ ಪಾಯ್ಸ​ನಿಂಗ್‌ ಪ್ರಕ​ರ​ಣ​ಗಳು ಹೆಚ್ಚಾದ ಹಿನ್ನೆ​ಲೆ​ಯಲ್ಲಿ ಪಾರ್ಸೆಲ್‌ ಕೊಡುವ ಆಹಾ​ರದ ಪೊಟ್ಟ​ಣ​ಗಳ ಮೇಲೆ ಆಹಾರ ತಯಾರಾದ ದಿನ ಹಾಗೂ ಅಂತಿಮ ದಿನದ ಅಥವಾ ಸಮಯ ಪ್ರಕ​ಟಿ​ಸು​ವು​ದನ್ನು ಕಡ್ಡಾ​ಯ​ಗೊ​ಳಿ​ಸಿದೆ.

ಇದನ್ನು ನಮೂ​ದಿ​ಸಿ​ಲ್ಲದ ಆಹಾರ ಪದಾ​ರ್ಥ​ಗ​ಳನ್ನು ನಿಷೇ​ಧಿ​ಸಿದೆ. ಆಹಾ​ರ ತಯಾ​ರಿ​ಸಿದ ದಿನಾಂಕ ಮತ್ತು ಸಮಯ, ಪ್ಯಾಕ್‌ ಮಾಡ​ಲಾದ ದಿನಾಂಕ ಮತ್ತು ಸಮಯ, ಆಹಾ​ರ​ವನ್ನು ತಿನ್ನ​ಬ​ಹು​ದಾ​ದ ಅಂತಿಮ ದಿನಾಂಕವನ್ನು ಪ್ರಕ​ಟಿ​ಸು​ವುದು ಕಡ್ಡಾಯ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿ​ದ್ದಾರೆ.

‘ಆ​ಹಾರ ಸುರ​ಕ್ಷತಾ ಮಾನ​ದಂಡದ ನಿಯ​ಮ​ಗಳ ಪ್ರಕಾರ, ಬಿಸಿ ಆಹಾ​ರ​ಗಳನ್ನು ತಯಾ​ರಿ​ಸಿದ 2 ಗಂಟೆ​ಗಳ ಒಳಗೆ ತಿನ್ನ​ಬೇಕು. ಇಂತಹ ಆಹಾ​ರ​ಗ​ಳನ್ನು ಸಾಗಿ​ಸು​ವಾಗ 60 ಡಿಗ್ರಿ ಉಷ್ಣಾಂಶ ಇರು​ವಂತೆ ನೋಡಿ​ಕೊ​ಳ್ಳ​ಬೇಕು. 2 ಗಂಟೆ​ಗ​ಳಿಗೂ ಹೆಚ್ಚು ಕಾಲ ಸಾಮಾನ್ಯ ತಾಪ​ಮಾ​ನಕ್ಕೆ ತೆರೆ​ದಿಟ್ಟಆಹಾರ ಪದಾ​ರ್ಥ​ವನ್ನು ಸೇವಿ​ಸು​ವುದು ಆರೋ​ಗ್ಯಕ್ಕೆ  ಒಳ್ಳೆ​ಯ​ದಲ್ಲ. ಹಾಗಾಗಿ ಸುರ​ಕ್ಷತಾ ಚೀಟಿ​ಗಳು ಮತ್ತು ಎಕ್ಸ್‌​ಪೈರಿ ದಿನಾಂಕ​ಗ​ಳಿ​ಲ್ಲದ ಆಹಾರ ಪದಾ​ರ್ಥ​ಗಳ ಪೊಟ್ಟ​ಣ​ಗ​ಳನ್ನು ನಿಷೇ​ಧಿ​ಸ​ಲಾ​ಗಿದೆ’ ಎಂದು ಅವರು ಹೇಳಿ​ದ್ದಾರೆ  .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

15 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

15 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago