ಕಾಲು ಬಾಯಿ ಜ್ವರವು ವೈರಾಣುವಿನಿಂದ ಹರಡುವ ರೋಗವಾಗಿದ್ದು, ರೋಗ ತಗುಲಿದ ನಂತರ ಚಿಕಿತ್ಸೆ ಮತ್ತು ನಿಯಂತ್ರಣ ಕಷ್ಟಸಾಧ್ಯವಾಗಿರುತ್ತದೆ.ಆದುದರಿಂದ ರೋಗವು ಬಾರದ ರೀತಿಯಲ್ಲಿ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕುವುದು ಏಕೈಕ ಮಾರ್ಗವಾಗಿರುತ್ತದೆ.ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿದ್ದರೂ ಸಹ ಪ್ರತಿ 6 ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಿ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಅವಶ್ಯಕವಾಗಿದೆ.
ಪಶುಪಾಲನಾ ಇಲಾಖೆ ಮತ್ತು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕಲಾಗುವುದು.ಲಸಿಕಾ ಕಾರ್ಯಕ್ರಮದ ಯಶಸ್ವಿಗಾಗಿ 41-ಪಶುವೈದ್ಯಾಧಿಕಾರಿ ಮತ್ತು 251-ಸಿಬ್ಬಂದಿಯವರನ್ನೊಳಗೊಂಡ ಒಟ್ಟು 34 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡಕ್ಕೆ ಒಂದು ವಾಹನದ ವ್ಯವಸ್ಥೆ ಮಾಡಲಾಗಿದೆ.ಲಸಿಕೆ ಹಾಕುವ ಹಿಂದಿನ ದಿನ ಇಲಾಖೆಯ ಸಿಬ್ಬಂದಿಗಳು ಹಳ್ಳಿಗಳಲ್ಲಿ ಪ್ರಚಾರ ನಡೆಸಲಿರುವರು.ನಿಗದಿತ ದಿನಾಂಕ ಮತ್ತು ಸಮಯದಂದು ಜಾನುವಾರು ಮಾಲೀಕರು, ರೈತರು ತಾವು ಸಾಕಾಣಿಕೆ ಮಾಡುತ್ತಿರುವ ದನ, ಕರು, ಎಮ್ಮೆ ಮತ್ತು ಹಂದಿಗಳಿಗೆ ಲಸಿಕೆ ಹಾಕಿಸುವುದರಂದಿಗೆ ಕಾಲು ಬಾಯಿ ಜ್ವರ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಸಹಕರಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…