ಕಾಲು ಬಾಯಿ ಜ್ವರವು ವೈರಾಣುವಿನಿಂದ ಹರಡುವ ರೋಗವಾಗಿದ್ದು, ರೋಗ ತಗುಲಿದ ನಂತರ ಚಿಕಿತ್ಸೆ ಮತ್ತು ನಿಯಂತ್ರಣ ಕಷ್ಟಸಾಧ್ಯವಾಗಿರುತ್ತದೆ.ಆದುದರಿಂದ ರೋಗವು ಬಾರದ ರೀತಿಯಲ್ಲಿ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕುವುದು ಏಕೈಕ ಮಾರ್ಗವಾಗಿರುತ್ತದೆ.ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿದ್ದರೂ ಸಹ ಪ್ರತಿ 6 ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಿ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಅವಶ್ಯಕವಾಗಿದೆ.
ಪಶುಪಾಲನಾ ಇಲಾಖೆ ಮತ್ತು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕಲಾಗುವುದು.ಲಸಿಕಾ ಕಾರ್ಯಕ್ರಮದ ಯಶಸ್ವಿಗಾಗಿ 41-ಪಶುವೈದ್ಯಾಧಿಕಾರಿ ಮತ್ತು 251-ಸಿಬ್ಬಂದಿಯವರನ್ನೊಳಗೊಂಡ ಒಟ್ಟು 34 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡಕ್ಕೆ ಒಂದು ವಾಹನದ ವ್ಯವಸ್ಥೆ ಮಾಡಲಾಗಿದೆ.ಲಸಿಕೆ ಹಾಕುವ ಹಿಂದಿನ ದಿನ ಇಲಾಖೆಯ ಸಿಬ್ಬಂದಿಗಳು ಹಳ್ಳಿಗಳಲ್ಲಿ ಪ್ರಚಾರ ನಡೆಸಲಿರುವರು.ನಿಗದಿತ ದಿನಾಂಕ ಮತ್ತು ಸಮಯದಂದು ಜಾನುವಾರು ಮಾಲೀಕರು, ರೈತರು ತಾವು ಸಾಕಾಣಿಕೆ ಮಾಡುತ್ತಿರುವ ದನ, ಕರು, ಎಮ್ಮೆ ಮತ್ತು ಹಂದಿಗಳಿಗೆ ಲಸಿಕೆ ಹಾಕಿಸುವುದರಂದಿಗೆ ಕಾಲು ಬಾಯಿ ಜ್ವರ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಸಹಕರಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…