Advertisement
Local mirror

ಅ. 2 ರಿಂದ 15 ರವರೆಗೆ ದ ಕ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಉಚಿತ ಕಾಲುಬಾಯಿ ಜ್ವರ ಲಸಿಕೆ

Share
ಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ದನ, ಎಮ್ಮೆ, ಹಂದಿಗಳಿಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಪಲ್ಸ್ ಪೋಲಿಯೋ ಮಾದರಿ 17 ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಅಕ್ಟೋಬರ್ 02 ರಿಂದ 15 ರವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ವತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿರುವ ಒಟ್ಟು 238000 (ದನ, ಎಮ್ಮೆ, ಹಂದಿ) ಜಾನುವಾರುಗಳಿಗೆ ಉಚಿತವಾಗಿ ಕಾಲುಬಾಯಿ ಜ್ವರ ಲಸಿಕೆಯನ್ನು ಹಾಕಲಾಗುತ್ತದೆ.

ಕಾಲು ಬಾಯಿ ಜ್ವರವು ವೈರಾಣುವಿನಿಂದ ಹರಡುವ ರೋಗವಾಗಿದ್ದು, ರೋಗ ತಗುಲಿದ ನಂತರ ಚಿಕಿತ್ಸೆ ಮತ್ತು ನಿಯಂತ್ರಣ ಕಷ್ಟಸಾಧ್ಯವಾಗಿರುತ್ತದೆ.ಆದುದರಿಂದ ರೋಗವು ಬಾರದ ರೀತಿಯಲ್ಲಿ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕುವುದು ಏಕೈಕ ಮಾರ್ಗವಾಗಿರುತ್ತದೆ.ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿದ್ದರೂ ಸಹ ಪ್ರತಿ 6 ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಿ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಅವಶ್ಯಕವಾಗಿದೆ.

ಪಶುಪಾಲನಾ ಇಲಾಖೆ ಮತ್ತು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕಲಾಗುವುದು.ಲಸಿಕಾ ಕಾರ್ಯಕ್ರಮದ ಯಶಸ್ವಿಗಾಗಿ 41-ಪಶುವೈದ್ಯಾಧಿಕಾರಿ ಮತ್ತು 251-ಸಿಬ್ಬಂದಿಯವರನ್ನೊಳಗೊಂಡ ಒಟ್ಟು 34 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡಕ್ಕೆ ಒಂದು ವಾಹನದ ವ್ಯವಸ್ಥೆ ಮಾಡಲಾಗಿದೆ.ಲಸಿಕೆ ಹಾಕುವ ಹಿಂದಿನ ದಿನ ಇಲಾಖೆಯ ಸಿಬ್ಬಂದಿಗಳು ಹಳ್ಳಿಗಳಲ್ಲಿ ಪ್ರಚಾರ ನಡೆಸಲಿರುವರು.ನಿಗದಿತ ದಿನಾಂಕ ಮತ್ತು ಸಮಯದಂದು ಜಾನುವಾರು ಮಾಲೀಕರು, ರೈತರು ತಾವು ಸಾಕಾಣಿಕೆ ಮಾಡುತ್ತಿರುವ ದನ, ಕರು, ಎಮ್ಮೆ ಮತ್ತು ಹಂದಿಗಳಿಗೆ ಲಸಿಕೆ ಹಾಕಿಸುವುದರಂದಿಗೆ ಕಾಲು ಬಾಯಿ ಜ್ವರ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಸಹಕರಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

7 hours ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

13 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

13 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

23 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

24 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

1 day ago