ಕಾಲು ಬಾಯಿ ಜ್ವರವು ವೈರಾಣುವಿನಿಂದ ಹರಡುವ ರೋಗವಾಗಿದ್ದು, ರೋಗ ತಗುಲಿದ ನಂತರ ಚಿಕಿತ್ಸೆ ಮತ್ತು ನಿಯಂತ್ರಣ ಕಷ್ಟಸಾಧ್ಯವಾಗಿರುತ್ತದೆ.ಆದುದರಿಂದ ರೋಗವು ಬಾರದ ರೀತಿಯಲ್ಲಿ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕುವುದು ಏಕೈಕ ಮಾರ್ಗವಾಗಿರುತ್ತದೆ.ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿದ್ದರೂ ಸಹ ಪ್ರತಿ 6 ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಿ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಅವಶ್ಯಕವಾಗಿದೆ.
ಪಶುಪಾಲನಾ ಇಲಾಖೆ ಮತ್ತು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕಲಾಗುವುದು.ಲಸಿಕಾ ಕಾರ್ಯಕ್ರಮದ ಯಶಸ್ವಿಗಾಗಿ 41-ಪಶುವೈದ್ಯಾಧಿಕಾರಿ ಮತ್ತು 251-ಸಿಬ್ಬಂದಿಯವರನ್ನೊಳಗೊಂಡ ಒಟ್ಟು 34 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡಕ್ಕೆ ಒಂದು ವಾಹನದ ವ್ಯವಸ್ಥೆ ಮಾಡಲಾಗಿದೆ.ಲಸಿಕೆ ಹಾಕುವ ಹಿಂದಿನ ದಿನ ಇಲಾಖೆಯ ಸಿಬ್ಬಂದಿಗಳು ಹಳ್ಳಿಗಳಲ್ಲಿ ಪ್ರಚಾರ ನಡೆಸಲಿರುವರು.ನಿಗದಿತ ದಿನಾಂಕ ಮತ್ತು ಸಮಯದಂದು ಜಾನುವಾರು ಮಾಲೀಕರು, ರೈತರು ತಾವು ಸಾಕಾಣಿಕೆ ಮಾಡುತ್ತಿರುವ ದನ, ಕರು, ಎಮ್ಮೆ ಮತ್ತು ಹಂದಿಗಳಿಗೆ ಲಸಿಕೆ ಹಾಕಿಸುವುದರಂದಿಗೆ ಕಾಲು ಬಾಯಿ ಜ್ವರ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಸಹಕರಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…