Advertisement
Local mirror

ಅ. 2 ರಿಂದ 15 ರವರೆಗೆ ದ ಕ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಉಚಿತ ಕಾಲುಬಾಯಿ ಜ್ವರ ಲಸಿಕೆ

Share
ಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ದನ, ಎಮ್ಮೆ, ಹಂದಿಗಳಿಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಪಲ್ಸ್ ಪೋಲಿಯೋ ಮಾದರಿ 17 ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಅಕ್ಟೋಬರ್ 02 ರಿಂದ 15 ರವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ವತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿರುವ ಒಟ್ಟು 238000 (ದನ, ಎಮ್ಮೆ, ಹಂದಿ) ಜಾನುವಾರುಗಳಿಗೆ ಉಚಿತವಾಗಿ ಕಾಲುಬಾಯಿ ಜ್ವರ ಲಸಿಕೆಯನ್ನು ಹಾಕಲಾಗುತ್ತದೆ.

ಕಾಲು ಬಾಯಿ ಜ್ವರವು ವೈರಾಣುವಿನಿಂದ ಹರಡುವ ರೋಗವಾಗಿದ್ದು, ರೋಗ ತಗುಲಿದ ನಂತರ ಚಿಕಿತ್ಸೆ ಮತ್ತು ನಿಯಂತ್ರಣ ಕಷ್ಟಸಾಧ್ಯವಾಗಿರುತ್ತದೆ.ಆದುದರಿಂದ ರೋಗವು ಬಾರದ ರೀತಿಯಲ್ಲಿ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕುವುದು ಏಕೈಕ ಮಾರ್ಗವಾಗಿರುತ್ತದೆ.ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿದ್ದರೂ ಸಹ ಪ್ರತಿ 6 ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಿ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಅವಶ್ಯಕವಾಗಿದೆ.

ಪಶುಪಾಲನಾ ಇಲಾಖೆ ಮತ್ತು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕಲಾಗುವುದು.ಲಸಿಕಾ ಕಾರ್ಯಕ್ರಮದ ಯಶಸ್ವಿಗಾಗಿ 41-ಪಶುವೈದ್ಯಾಧಿಕಾರಿ ಮತ್ತು 251-ಸಿಬ್ಬಂದಿಯವರನ್ನೊಳಗೊಂಡ ಒಟ್ಟು 34 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡಕ್ಕೆ ಒಂದು ವಾಹನದ ವ್ಯವಸ್ಥೆ ಮಾಡಲಾಗಿದೆ.ಲಸಿಕೆ ಹಾಕುವ ಹಿಂದಿನ ದಿನ ಇಲಾಖೆಯ ಸಿಬ್ಬಂದಿಗಳು ಹಳ್ಳಿಗಳಲ್ಲಿ ಪ್ರಚಾರ ನಡೆಸಲಿರುವರು.ನಿಗದಿತ ದಿನಾಂಕ ಮತ್ತು ಸಮಯದಂದು ಜಾನುವಾರು ಮಾಲೀಕರು, ರೈತರು ತಾವು ಸಾಕಾಣಿಕೆ ಮಾಡುತ್ತಿರುವ ದನ, ಕರು, ಎಮ್ಮೆ ಮತ್ತು ಹಂದಿಗಳಿಗೆ ಲಸಿಕೆ ಹಾಕಿಸುವುದರಂದಿಗೆ ಕಾಲು ಬಾಯಿ ಜ್ವರ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಸಹಕರಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

9 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago