ಕಾಲು ಬಾಯಿ ಜ್ವರವು ವೈರಾಣುವಿನಿಂದ ಹರಡುವ ರೋಗವಾಗಿದ್ದು, ರೋಗ ತಗುಲಿದ ನಂತರ ಚಿಕಿತ್ಸೆ ಮತ್ತು ನಿಯಂತ್ರಣ ಕಷ್ಟಸಾಧ್ಯವಾಗಿರುತ್ತದೆ.ಆದುದರಿಂದ ರೋಗವು ಬಾರದ ರೀತಿಯಲ್ಲಿ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕುವುದು ಏಕೈಕ ಮಾರ್ಗವಾಗಿರುತ್ತದೆ.ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿದ್ದರೂ ಸಹ ಪ್ರತಿ 6 ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಿ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಅವಶ್ಯಕವಾಗಿದೆ.
ಪಶುಪಾಲನಾ ಇಲಾಖೆ ಮತ್ತು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕಲಾಗುವುದು.ಲಸಿಕಾ ಕಾರ್ಯಕ್ರಮದ ಯಶಸ್ವಿಗಾಗಿ 41-ಪಶುವೈದ್ಯಾಧಿಕಾರಿ ಮತ್ತು 251-ಸಿಬ್ಬಂದಿಯವರನ್ನೊಳಗೊಂಡ ಒಟ್ಟು 34 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡಕ್ಕೆ ಒಂದು ವಾಹನದ ವ್ಯವಸ್ಥೆ ಮಾಡಲಾಗಿದೆ.ಲಸಿಕೆ ಹಾಕುವ ಹಿಂದಿನ ದಿನ ಇಲಾಖೆಯ ಸಿಬ್ಬಂದಿಗಳು ಹಳ್ಳಿಗಳಲ್ಲಿ ಪ್ರಚಾರ ನಡೆಸಲಿರುವರು.ನಿಗದಿತ ದಿನಾಂಕ ಮತ್ತು ಸಮಯದಂದು ಜಾನುವಾರು ಮಾಲೀಕರು, ರೈತರು ತಾವು ಸಾಕಾಣಿಕೆ ಮಾಡುತ್ತಿರುವ ದನ, ಕರು, ಎಮ್ಮೆ ಮತ್ತು ಹಂದಿಗಳಿಗೆ ಲಸಿಕೆ ಹಾಕಿಸುವುದರಂದಿಗೆ ಕಾಲು ಬಾಯಿ ಜ್ವರ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಸಹಕರಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…
ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್–2026ಕ್ಕೆ…
ಮ್ಯಾನ್ಮಾರ್ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…