ಕಾಲು ಬಾಯಿ ಜ್ವರವು ವೈರಾಣುವಿನಿಂದ ಹರಡುವ ರೋಗವಾಗಿದ್ದು, ರೋಗ ತಗುಲಿದ ನಂತರ ಚಿಕಿತ್ಸೆ ಮತ್ತು ನಿಯಂತ್ರಣ ಕಷ್ಟಸಾಧ್ಯವಾಗಿರುತ್ತದೆ.ಆದುದರಿಂದ ರೋಗವು ಬಾರದ ರೀತಿಯಲ್ಲಿ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕುವುದು ಏಕೈಕ ಮಾರ್ಗವಾಗಿರುತ್ತದೆ.ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿದ್ದರೂ ಸಹ ಪ್ರತಿ 6 ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಿ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಅವಶ್ಯಕವಾಗಿದೆ.
ಪಶುಪಾಲನಾ ಇಲಾಖೆ ಮತ್ತು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕಲಾಗುವುದು.ಲಸಿಕಾ ಕಾರ್ಯಕ್ರಮದ ಯಶಸ್ವಿಗಾಗಿ 41-ಪಶುವೈದ್ಯಾಧಿಕಾರಿ ಮತ್ತು 251-ಸಿಬ್ಬಂದಿಯವರನ್ನೊಳಗೊಂಡ ಒಟ್ಟು 34 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡಕ್ಕೆ ಒಂದು ವಾಹನದ ವ್ಯವಸ್ಥೆ ಮಾಡಲಾಗಿದೆ.ಲಸಿಕೆ ಹಾಕುವ ಹಿಂದಿನ ದಿನ ಇಲಾಖೆಯ ಸಿಬ್ಬಂದಿಗಳು ಹಳ್ಳಿಗಳಲ್ಲಿ ಪ್ರಚಾರ ನಡೆಸಲಿರುವರು.ನಿಗದಿತ ದಿನಾಂಕ ಮತ್ತು ಸಮಯದಂದು ಜಾನುವಾರು ಮಾಲೀಕರು, ರೈತರು ತಾವು ಸಾಕಾಣಿಕೆ ಮಾಡುತ್ತಿರುವ ದನ, ಕರು, ಎಮ್ಮೆ ಮತ್ತು ಹಂದಿಗಳಿಗೆ ಲಸಿಕೆ ಹಾಕಿಸುವುದರಂದಿಗೆ ಕಾಲು ಬಾಯಿ ಜ್ವರ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಸಹಕರಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…