Advertisement
Local mirror

ಅ. 2 ರಿಂದ 15 ರವರೆಗೆ ದ ಕ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಉಚಿತ ಕಾಲುಬಾಯಿ ಜ್ವರ ಲಸಿಕೆ

Share
ಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ದನ, ಎಮ್ಮೆ, ಹಂದಿಗಳಿಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಪಲ್ಸ್ ಪೋಲಿಯೋ ಮಾದರಿ 17 ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಅಕ್ಟೋಬರ್ 02 ರಿಂದ 15 ರವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ವತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿರುವ ಒಟ್ಟು 238000 (ದನ, ಎಮ್ಮೆ, ಹಂದಿ) ಜಾನುವಾರುಗಳಿಗೆ ಉಚಿತವಾಗಿ ಕಾಲುಬಾಯಿ ಜ್ವರ ಲಸಿಕೆಯನ್ನು ಹಾಕಲಾಗುತ್ತದೆ.

ಕಾಲು ಬಾಯಿ ಜ್ವರವು ವೈರಾಣುವಿನಿಂದ ಹರಡುವ ರೋಗವಾಗಿದ್ದು, ರೋಗ ತಗುಲಿದ ನಂತರ ಚಿಕಿತ್ಸೆ ಮತ್ತು ನಿಯಂತ್ರಣ ಕಷ್ಟಸಾಧ್ಯವಾಗಿರುತ್ತದೆ.ಆದುದರಿಂದ ರೋಗವು ಬಾರದ ರೀತಿಯಲ್ಲಿ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕುವುದು ಏಕೈಕ ಮಾರ್ಗವಾಗಿರುತ್ತದೆ.ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿದ್ದರೂ ಸಹ ಪ್ರತಿ 6 ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಿ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಅವಶ್ಯಕವಾಗಿದೆ.

ಪಶುಪಾಲನಾ ಇಲಾಖೆ ಮತ್ತು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕಲಾಗುವುದು.ಲಸಿಕಾ ಕಾರ್ಯಕ್ರಮದ ಯಶಸ್ವಿಗಾಗಿ 41-ಪಶುವೈದ್ಯಾಧಿಕಾರಿ ಮತ್ತು 251-ಸಿಬ್ಬಂದಿಯವರನ್ನೊಳಗೊಂಡ ಒಟ್ಟು 34 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡಕ್ಕೆ ಒಂದು ವಾಹನದ ವ್ಯವಸ್ಥೆ ಮಾಡಲಾಗಿದೆ.ಲಸಿಕೆ ಹಾಕುವ ಹಿಂದಿನ ದಿನ ಇಲಾಖೆಯ ಸಿಬ್ಬಂದಿಗಳು ಹಳ್ಳಿಗಳಲ್ಲಿ ಪ್ರಚಾರ ನಡೆಸಲಿರುವರು.ನಿಗದಿತ ದಿನಾಂಕ ಮತ್ತು ಸಮಯದಂದು ಜಾನುವಾರು ಮಾಲೀಕರು, ರೈತರು ತಾವು ಸಾಕಾಣಿಕೆ ಮಾಡುತ್ತಿರುವ ದನ, ಕರು, ಎಮ್ಮೆ ಮತ್ತು ಹಂದಿಗಳಿಗೆ ಲಸಿಕೆ ಹಾಕಿಸುವುದರಂದಿಗೆ ಕಾಲು ಬಾಯಿ ಜ್ವರ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಸಹಕರಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

2 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

10 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

14 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

19 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago