#Sampaje | ಪ್ರವಾಹಕ್ಕೆ ಕೊಚ್ಚಿ ಹೋದ ಸೇತುವೆ | ಯುವಕರಿಂದ ಕಾಲುಸಂಕ ನಿರ್ಮಾಣ | ಯುವಕರ ಗ್ರಾಮೀಣ ಕಾಳಜಿಗೆ ಪ್ರಶಂಸೆ |

September 11, 2022
9:59 PM

ಸುಮಾರು ಒಂದು ತಿಂಗಳಿನಿಂದ ದಕ್ಷಿಣ ಕನ್ನಡ  ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ, ಚೆಂಬು ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗಿತ್ತು. ಮಳೆ ಹಾಗೂ ಪ್ರವಾಹದ ಕಾರಣದಿಂದ ದ.ಕ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವು ಕಡೆ ಸೇತುವೆ, ಕಾಲು ಸಂಕ ಕೊಚ್ಚಿ ಹೋಗಿತ್ತು. ಇದೀಗ ಅಂತಹ ಕಡೆಗಳಲ್ಲಿ ಸೇತುವೆ ರಚನೆ ಆಗಬೇಕಾಗಿದೆ. ಗ್ರಾಮೀಣ ಭಾಗದ ಅಭಿವೃದ್ಧಿಯ ಕನಸು ಹೊತ್ತಿರುವ ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಯುವಕ ಸಂಘ  ಕಾಲು ಸಂಕ ರಚನೆ ಮಾಡಿಕೊಟ್ಟಿದೆ.

Advertisement
Advertisement

Advertisement

ಕೆಲವು ತಿಂಗಳ ಹಿಂದೆ ವಿಪರೀತ ಮಳೆಯಿಂದಾಗಿ ದ.ಕ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಿರುವ ಯು.ಪಿ.ರವೀಂದ್ರ ಇವರ ಮನೆಗೆ ಭೀಕರ ಮಳೆಯಿಂದಾಗಿ ಮನೆಗೆ ನೀರು ನುಗ್ಗಿ ಹಾನಿಯಾಗಿತ್ತು. ದಿನ ಬಳಕೆಗೆ ಉಪಯೋಗ ಮಾಡುವಂತಹ ಕಟ್ಟಿಗೆ ಸಾಮಾಗ್ರಿಗಳು ಮತ್ತು ಇತರ ಸಾಮಾಗ್ರಿಗಳು ನೀರು ಪಾಲಾಗಿತ್ತು. ಅದಲ್ಲದೆ ಈ ಮನೆಗೆ ತೆರಳುವ ಹಾಗೂ ಸಮೀಪದ ಮನೆಗೆ ತೆರಳುವ ರಸ್ತೆಯ ಹತ್ತಿರ ಇರುವ ಹೊಳೆಗೆ ಅಡ್ಡಲಾಗಿ ಸಂಪರ್ಕ ಕಾಲುಸೇತುವೆ ಸಂಪೂರ್ಣ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಹೀಗಾಗಿ ರವೀಂದ್ರ ಮತ್ತು ಮನೆಯವರಿಗೆ ಹಾದುಹೋಗಲು ಕಷ್ಟಕರವಾಗಿರುವುದರಿಂದ ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಯುವಕ ಸಂಘದ ವತಿಯಿಂದ ನಡೆದಾಡಲು ಕಾಲುಸೇತುವೆ ನಿರ್ಮಾಣ ಮಾಡಲಾಯಿತು.

ಈ ಶ್ರಮದಾನ ಕಾರ್ಯದಲ್ಲಿ ಪಯಸ್ವಿನಿ ಯುವಕ ಸಂಘ  ಸಂಪಾಜೆ ಕೊಡಗು ಇದರ ಹಿರಿಯ ಸದಸ್ಯರುಗಳು, ಸಂಘದ ಎಲ್ಲಾ ಸದಸ್ಯರುಗಳು ಹಾಗೂ ಯು.ಪಿ.ರವೀಂದ್ರ ಮತ್ತು ಮನೆಯವರು ಭಾಗವಹಿಸಿದರು. ಯುವಕರ ಗ್ರಾಮೀಣ ಕಾಳಜಿ ಹಾಗೂ ಸೇವಾ ಮನೋಭಾವಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್
May 31, 2025
12:05 AM
by: The Rural Mirror ಸುದ್ದಿಜಾಲ
ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ
May 30, 2025
11:52 PM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ
May 30, 2025
11:14 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
May 30, 2025
8:31 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group