#Sampaje | ಪ್ರವಾಹಕ್ಕೆ ಕೊಚ್ಚಿ ಹೋದ ಸೇತುವೆ | ಯುವಕರಿಂದ ಕಾಲುಸಂಕ ನಿರ್ಮಾಣ | ಯುವಕರ ಗ್ರಾಮೀಣ ಕಾಳಜಿಗೆ ಪ್ರಶಂಸೆ |

September 11, 2022
9:59 PM

ಸುಮಾರು ಒಂದು ತಿಂಗಳಿನಿಂದ ದಕ್ಷಿಣ ಕನ್ನಡ  ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ, ಚೆಂಬು ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗಿತ್ತು. ಮಳೆ ಹಾಗೂ ಪ್ರವಾಹದ ಕಾರಣದಿಂದ ದ.ಕ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವು ಕಡೆ ಸೇತುವೆ, ಕಾಲು ಸಂಕ ಕೊಚ್ಚಿ ಹೋಗಿತ್ತು. ಇದೀಗ ಅಂತಹ ಕಡೆಗಳಲ್ಲಿ ಸೇತುವೆ ರಚನೆ ಆಗಬೇಕಾಗಿದೆ. ಗ್ರಾಮೀಣ ಭಾಗದ ಅಭಿವೃದ್ಧಿಯ ಕನಸು ಹೊತ್ತಿರುವ ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಯುವಕ ಸಂಘ  ಕಾಲು ಸಂಕ ರಚನೆ ಮಾಡಿಕೊಟ್ಟಿದೆ.

ಕೆಲವು ತಿಂಗಳ ಹಿಂದೆ ವಿಪರೀತ ಮಳೆಯಿಂದಾಗಿ ದ.ಕ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಿರುವ ಯು.ಪಿ.ರವೀಂದ್ರ ಇವರ ಮನೆಗೆ ಭೀಕರ ಮಳೆಯಿಂದಾಗಿ ಮನೆಗೆ ನೀರು ನುಗ್ಗಿ ಹಾನಿಯಾಗಿತ್ತು. ದಿನ ಬಳಕೆಗೆ ಉಪಯೋಗ ಮಾಡುವಂತಹ ಕಟ್ಟಿಗೆ ಸಾಮಾಗ್ರಿಗಳು ಮತ್ತು ಇತರ ಸಾಮಾಗ್ರಿಗಳು ನೀರು ಪಾಲಾಗಿತ್ತು. ಅದಲ್ಲದೆ ಈ ಮನೆಗೆ ತೆರಳುವ ಹಾಗೂ ಸಮೀಪದ ಮನೆಗೆ ತೆರಳುವ ರಸ್ತೆಯ ಹತ್ತಿರ ಇರುವ ಹೊಳೆಗೆ ಅಡ್ಡಲಾಗಿ ಸಂಪರ್ಕ ಕಾಲುಸೇತುವೆ ಸಂಪೂರ್ಣ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಹೀಗಾಗಿ ರವೀಂದ್ರ ಮತ್ತು ಮನೆಯವರಿಗೆ ಹಾದುಹೋಗಲು ಕಷ್ಟಕರವಾಗಿರುವುದರಿಂದ ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಯುವಕ ಸಂಘದ ವತಿಯಿಂದ ನಡೆದಾಡಲು ಕಾಲುಸೇತುವೆ ನಿರ್ಮಾಣ ಮಾಡಲಾಯಿತು.

ಈ ಶ್ರಮದಾನ ಕಾರ್ಯದಲ್ಲಿ ಪಯಸ್ವಿನಿ ಯುವಕ ಸಂಘ  ಸಂಪಾಜೆ ಕೊಡಗು ಇದರ ಹಿರಿಯ ಸದಸ್ಯರುಗಳು, ಸಂಘದ ಎಲ್ಲಾ ಸದಸ್ಯರುಗಳು ಹಾಗೂ ಯು.ಪಿ.ರವೀಂದ್ರ ಮತ್ತು ಮನೆಯವರು ಭಾಗವಹಿಸಿದರು. ಯುವಕರ ಗ್ರಾಮೀಣ ಕಾಳಜಿ ಹಾಗೂ ಸೇವಾ ಮನೋಭಾವಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror