ಸುಮಾರು ಒಂದು ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ, ಚೆಂಬು ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗಿತ್ತು. ಮಳೆ ಹಾಗೂ ಪ್ರವಾಹದ ಕಾರಣದಿಂದ ದ.ಕ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವು ಕಡೆ ಸೇತುವೆ, ಕಾಲು ಸಂಕ ಕೊಚ್ಚಿ ಹೋಗಿತ್ತು. ಇದೀಗ ಅಂತಹ ಕಡೆಗಳಲ್ಲಿ ಸೇತುವೆ ರಚನೆ ಆಗಬೇಕಾಗಿದೆ. ಗ್ರಾಮೀಣ ಭಾಗದ ಅಭಿವೃದ್ಧಿಯ ಕನಸು ಹೊತ್ತಿರುವ ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಯುವಕ ಸಂಘ ಕಾಲು ಸಂಕ ರಚನೆ ಮಾಡಿಕೊಟ್ಟಿದೆ.
ಕೆಲವು ತಿಂಗಳ ಹಿಂದೆ ವಿಪರೀತ ಮಳೆಯಿಂದಾಗಿ ದ.ಕ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಿರುವ ಯು.ಪಿ.ರವೀಂದ್ರ ಇವರ ಮನೆಗೆ ಭೀಕರ ಮಳೆಯಿಂದಾಗಿ ಮನೆಗೆ ನೀರು ನುಗ್ಗಿ ಹಾನಿಯಾಗಿತ್ತು. ದಿನ ಬಳಕೆಗೆ ಉಪಯೋಗ ಮಾಡುವಂತಹ ಕಟ್ಟಿಗೆ ಸಾಮಾಗ್ರಿಗಳು ಮತ್ತು ಇತರ ಸಾಮಾಗ್ರಿಗಳು ನೀರು ಪಾಲಾಗಿತ್ತು. ಅದಲ್ಲದೆ ಈ ಮನೆಗೆ ತೆರಳುವ ಹಾಗೂ ಸಮೀಪದ ಮನೆಗೆ ತೆರಳುವ ರಸ್ತೆಯ ಹತ್ತಿರ ಇರುವ ಹೊಳೆಗೆ ಅಡ್ಡಲಾಗಿ ಸಂಪರ್ಕ ಕಾಲುಸೇತುವೆ ಸಂಪೂರ್ಣ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಹೀಗಾಗಿ ರವೀಂದ್ರ ಮತ್ತು ಮನೆಯವರಿಗೆ ಹಾದುಹೋಗಲು ಕಷ್ಟಕರವಾಗಿರುವುದರಿಂದ ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಯುವಕ ಸಂಘದ ವತಿಯಿಂದ ನಡೆದಾಡಲು ಕಾಲುಸೇತುವೆ ನಿರ್ಮಾಣ ಮಾಡಲಾಯಿತು.
ಈ ಶ್ರಮದಾನ ಕಾರ್ಯದಲ್ಲಿ ಪಯಸ್ವಿನಿ ಯುವಕ ಸಂಘ ಸಂಪಾಜೆ ಕೊಡಗು ಇದರ ಹಿರಿಯ ಸದಸ್ಯರುಗಳು, ಸಂಘದ ಎಲ್ಲಾ ಸದಸ್ಯರುಗಳು ಹಾಗೂ ಯು.ಪಿ.ರವೀಂದ್ರ ಮತ್ತು ಮನೆಯವರು ಭಾಗವಹಿಸಿದರು. ಯುವಕರ ಗ್ರಾಮೀಣ ಕಾಳಜಿ ಹಾಗೂ ಸೇವಾ ಮನೋಭಾವಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…