ಸುಮಾರು ಒಂದು ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ, ಚೆಂಬು ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗಿತ್ತು. ಮಳೆ ಹಾಗೂ ಪ್ರವಾಹದ ಕಾರಣದಿಂದ ದ.ಕ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವು ಕಡೆ ಸೇತುವೆ, ಕಾಲು ಸಂಕ ಕೊಚ್ಚಿ ಹೋಗಿತ್ತು. ಇದೀಗ ಅಂತಹ ಕಡೆಗಳಲ್ಲಿ ಸೇತುವೆ ರಚನೆ ಆಗಬೇಕಾಗಿದೆ. ಗ್ರಾಮೀಣ ಭಾಗದ ಅಭಿವೃದ್ಧಿಯ ಕನಸು ಹೊತ್ತಿರುವ ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಯುವಕ ಸಂಘ ಕಾಲು ಸಂಕ ರಚನೆ ಮಾಡಿಕೊಟ್ಟಿದೆ.
ಕೆಲವು ತಿಂಗಳ ಹಿಂದೆ ವಿಪರೀತ ಮಳೆಯಿಂದಾಗಿ ದ.ಕ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಿರುವ ಯು.ಪಿ.ರವೀಂದ್ರ ಇವರ ಮನೆಗೆ ಭೀಕರ ಮಳೆಯಿಂದಾಗಿ ಮನೆಗೆ ನೀರು ನುಗ್ಗಿ ಹಾನಿಯಾಗಿತ್ತು. ದಿನ ಬಳಕೆಗೆ ಉಪಯೋಗ ಮಾಡುವಂತಹ ಕಟ್ಟಿಗೆ ಸಾಮಾಗ್ರಿಗಳು ಮತ್ತು ಇತರ ಸಾಮಾಗ್ರಿಗಳು ನೀರು ಪಾಲಾಗಿತ್ತು. ಅದಲ್ಲದೆ ಈ ಮನೆಗೆ ತೆರಳುವ ಹಾಗೂ ಸಮೀಪದ ಮನೆಗೆ ತೆರಳುವ ರಸ್ತೆಯ ಹತ್ತಿರ ಇರುವ ಹೊಳೆಗೆ ಅಡ್ಡಲಾಗಿ ಸಂಪರ್ಕ ಕಾಲುಸೇತುವೆ ಸಂಪೂರ್ಣ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಹೀಗಾಗಿ ರವೀಂದ್ರ ಮತ್ತು ಮನೆಯವರಿಗೆ ಹಾದುಹೋಗಲು ಕಷ್ಟಕರವಾಗಿರುವುದರಿಂದ ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಯುವಕ ಸಂಘದ ವತಿಯಿಂದ ನಡೆದಾಡಲು ಕಾಲುಸೇತುವೆ ನಿರ್ಮಾಣ ಮಾಡಲಾಯಿತು.
ಈ ಶ್ರಮದಾನ ಕಾರ್ಯದಲ್ಲಿ ಪಯಸ್ವಿನಿ ಯುವಕ ಸಂಘ ಸಂಪಾಜೆ ಕೊಡಗು ಇದರ ಹಿರಿಯ ಸದಸ್ಯರುಗಳು, ಸಂಘದ ಎಲ್ಲಾ ಸದಸ್ಯರುಗಳು ಹಾಗೂ ಯು.ಪಿ.ರವೀಂದ್ರ ಮತ್ತು ಮನೆಯವರು ಭಾಗವಹಿಸಿದರು. ಯುವಕರ ಗ್ರಾಮೀಣ ಕಾಳಜಿ ಹಾಗೂ ಸೇವಾ ಮನೋಭಾವಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…