ಸುಮಾರು ಒಂದು ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ, ಚೆಂಬು ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗಿತ್ತು. ಮಳೆ ಹಾಗೂ ಪ್ರವಾಹದ ಕಾರಣದಿಂದ ದ.ಕ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವು ಕಡೆ ಸೇತುವೆ, ಕಾಲು ಸಂಕ ಕೊಚ್ಚಿ ಹೋಗಿತ್ತು. ಇದೀಗ ಅಂತಹ ಕಡೆಗಳಲ್ಲಿ ಸೇತುವೆ ರಚನೆ ಆಗಬೇಕಾಗಿದೆ. ಗ್ರಾಮೀಣ ಭಾಗದ ಅಭಿವೃದ್ಧಿಯ ಕನಸು ಹೊತ್ತಿರುವ ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಯುವಕ ಸಂಘ ಕಾಲು ಸಂಕ ರಚನೆ ಮಾಡಿಕೊಟ್ಟಿದೆ.
ಕೆಲವು ತಿಂಗಳ ಹಿಂದೆ ವಿಪರೀತ ಮಳೆಯಿಂದಾಗಿ ದ.ಕ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಿರುವ ಯು.ಪಿ.ರವೀಂದ್ರ ಇವರ ಮನೆಗೆ ಭೀಕರ ಮಳೆಯಿಂದಾಗಿ ಮನೆಗೆ ನೀರು ನುಗ್ಗಿ ಹಾನಿಯಾಗಿತ್ತು. ದಿನ ಬಳಕೆಗೆ ಉಪಯೋಗ ಮಾಡುವಂತಹ ಕಟ್ಟಿಗೆ ಸಾಮಾಗ್ರಿಗಳು ಮತ್ತು ಇತರ ಸಾಮಾಗ್ರಿಗಳು ನೀರು ಪಾಲಾಗಿತ್ತು. ಅದಲ್ಲದೆ ಈ ಮನೆಗೆ ತೆರಳುವ ಹಾಗೂ ಸಮೀಪದ ಮನೆಗೆ ತೆರಳುವ ರಸ್ತೆಯ ಹತ್ತಿರ ಇರುವ ಹೊಳೆಗೆ ಅಡ್ಡಲಾಗಿ ಸಂಪರ್ಕ ಕಾಲುಸೇತುವೆ ಸಂಪೂರ್ಣ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಹೀಗಾಗಿ ರವೀಂದ್ರ ಮತ್ತು ಮನೆಯವರಿಗೆ ಹಾದುಹೋಗಲು ಕಷ್ಟಕರವಾಗಿರುವುದರಿಂದ ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಯುವಕ ಸಂಘದ ವತಿಯಿಂದ ನಡೆದಾಡಲು ಕಾಲುಸೇತುವೆ ನಿರ್ಮಾಣ ಮಾಡಲಾಯಿತು.
ಈ ಶ್ರಮದಾನ ಕಾರ್ಯದಲ್ಲಿ ಪಯಸ್ವಿನಿ ಯುವಕ ಸಂಘ ಸಂಪಾಜೆ ಕೊಡಗು ಇದರ ಹಿರಿಯ ಸದಸ್ಯರುಗಳು, ಸಂಘದ ಎಲ್ಲಾ ಸದಸ್ಯರುಗಳು ಹಾಗೂ ಯು.ಪಿ.ರವೀಂದ್ರ ಮತ್ತು ಮನೆಯವರು ಭಾಗವಹಿಸಿದರು. ಯುವಕರ ಗ್ರಾಮೀಣ ಕಾಳಜಿ ಹಾಗೂ ಸೇವಾ ಮನೋಭಾವಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…