ಸುಮಾರು ಒಂದು ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ, ಚೆಂಬು ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗಿತ್ತು. ಮಳೆ ಹಾಗೂ ಪ್ರವಾಹದ ಕಾರಣದಿಂದ ದ.ಕ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವು ಕಡೆ ಸೇತುವೆ, ಕಾಲು ಸಂಕ ಕೊಚ್ಚಿ ಹೋಗಿತ್ತು. ಇದೀಗ ಅಂತಹ ಕಡೆಗಳಲ್ಲಿ ಸೇತುವೆ ರಚನೆ ಆಗಬೇಕಾಗಿದೆ. ಗ್ರಾಮೀಣ ಭಾಗದ ಅಭಿವೃದ್ಧಿಯ ಕನಸು ಹೊತ್ತಿರುವ ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಯುವಕ ಸಂಘ ಕಾಲು ಸಂಕ ರಚನೆ ಮಾಡಿಕೊಟ್ಟಿದೆ.
ಕೆಲವು ತಿಂಗಳ ಹಿಂದೆ ವಿಪರೀತ ಮಳೆಯಿಂದಾಗಿ ದ.ಕ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಿರುವ ಯು.ಪಿ.ರವೀಂದ್ರ ಇವರ ಮನೆಗೆ ಭೀಕರ ಮಳೆಯಿಂದಾಗಿ ಮನೆಗೆ ನೀರು ನುಗ್ಗಿ ಹಾನಿಯಾಗಿತ್ತು. ದಿನ ಬಳಕೆಗೆ ಉಪಯೋಗ ಮಾಡುವಂತಹ ಕಟ್ಟಿಗೆ ಸಾಮಾಗ್ರಿಗಳು ಮತ್ತು ಇತರ ಸಾಮಾಗ್ರಿಗಳು ನೀರು ಪಾಲಾಗಿತ್ತು. ಅದಲ್ಲದೆ ಈ ಮನೆಗೆ ತೆರಳುವ ಹಾಗೂ ಸಮೀಪದ ಮನೆಗೆ ತೆರಳುವ ರಸ್ತೆಯ ಹತ್ತಿರ ಇರುವ ಹೊಳೆಗೆ ಅಡ್ಡಲಾಗಿ ಸಂಪರ್ಕ ಕಾಲುಸೇತುವೆ ಸಂಪೂರ್ಣ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಹೀಗಾಗಿ ರವೀಂದ್ರ ಮತ್ತು ಮನೆಯವರಿಗೆ ಹಾದುಹೋಗಲು ಕಷ್ಟಕರವಾಗಿರುವುದರಿಂದ ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಯುವಕ ಸಂಘದ ವತಿಯಿಂದ ನಡೆದಾಡಲು ಕಾಲುಸೇತುವೆ ನಿರ್ಮಾಣ ಮಾಡಲಾಯಿತು.
ಈ ಶ್ರಮದಾನ ಕಾರ್ಯದಲ್ಲಿ ಪಯಸ್ವಿನಿ ಯುವಕ ಸಂಘ ಸಂಪಾಜೆ ಕೊಡಗು ಇದರ ಹಿರಿಯ ಸದಸ್ಯರುಗಳು, ಸಂಘದ ಎಲ್ಲಾ ಸದಸ್ಯರುಗಳು ಹಾಗೂ ಯು.ಪಿ.ರವೀಂದ್ರ ಮತ್ತು ಮನೆಯವರು ಭಾಗವಹಿಸಿದರು. ಯುವಕರ ಗ್ರಾಮೀಣ ಕಾಳಜಿ ಹಾಗೂ ಸೇವಾ ಮನೋಭಾವಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…