Advertisement
ಸುದ್ದಿಗಳು

ಮರದ ಕಾಲುಸಂಕ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ‌ ಅಭಿಯಾನ‌ | ಯುವ ತೇಜಸ್ಸು ಬಳಗದಿಂದ ಪ್ರಯತ್ನ | ನಿಮ್ಮ‌ ಬೆಂಬಲವೂ ಬೇಕಿದೆ… |

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿನೂತನ ಅಭಿಯಾನವೊಂದನ್ನು  ಯುವತೇಜಸ್ಸು ಟ್ರಸ್ಟ್‌ ಹಮ್ಮಿಕೊಂಡಿದೆ. ಯುವಕರನ್ನೊಳಗೊಂಡ ಈ ತಂಡವು ತನ್ನ ಮಾಸಿಕ ಯೋಜನೆಯ ಜೊತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರದ ಅಪಾಯಕಾರಿ ಕಾಲುಸಂಕ ನಿರ್ಮೂಲನೆ ಮಾಡಿ ಸುಸಜ್ಜಿತವಾದ ಸುರಕ್ಷಿತ ಕಬ್ಬಿಣದ ಕಾಲುಸಂಕ ನಿರ್ಮಿಸುವ ಅಭಿಯಾನಕ್ಕೆ ಮುಂದಡಿ ಇಟ್ಟಿದೆ.

Advertisement
Advertisement

ಈ ಯೋಜನೆಯು ಸಾರ್ವಜನಿಕ ರಸ್ತೆಯಲ್ಲಿ ಅತಿ ಹೆಚ್ಚು ಮನೆಗಳ ಸಂಪರ್ಕ ಹೊಂದಿದ ಅಪಾಯಕಾರಿ ಮರದ ಕಾಲುಸಂಕ ಇರುವ ಯೋಜನೆಯನ್ನು ಕೈಗೆತ್ತಿಕೊಂಡು ಮೊದಲ ಪ್ರಾಶಸ್ತ್ಯದಲ್ಲಿ ಸುಸಜ್ಜಿತ ಕಬ್ಬಿಣದ ಕಾಲುಸಂಕ ನಿರ್ಮಿಸುವ ಮೂಲಕ ಸಮಸ್ಯೆಗಳಿಗೆ ಮುಕ್ತಿ ಕೊಡುವ ಕಾರ್ಯ ಮಾಡುವ ದೃಢ ಸಂಕಲ್ಪ ಮಾಡಿದೆ. ಇದಕ್ಕಾಗಿ ಮ್ಮ ಊರಿನ ಅಪಾಯಕಾರಿ ಮರದ ಕಾಲು ಸಂಕದ ಪೋಟೋ ಸಮೇತ ವಿವರಗಳನ್ನು ಯುವ ತೇಜಸ್ಸು ಸಂಸ್ಥೆಗೆ ನೀಡಿದಲ್ಲಿ, ಅತೀ ಅಗತ್ಯ ಎನಿಸುವ ಸ್ಥಳಗಳಿಗೆ ಮೊದಲ ಪ್ರಾಶಸ್ತ್ಯ ನೀಡಿ, ಜಿಲ್ಲೆಯ ಪ್ರತಿ ಭಾಗದ ಮರದ ಅಪಾಯಕಾರಿ ಕಾಲುಸಂಕಗಳನ್ನು ತೆರವುಗೊಳಿಸಿ ಉತ್ತಮವಾದ ಕಬ್ಬಿಣದ ಕಾಲುಸಂಕ ನಿರ್ಮಾಣಕ್ಕೆ ಯುವ ತೇಜಸ್ಸು ಬಳಗ ಮುಂದಾಗಲಿದೆ‌.

Advertisement

ಮಾನವೀಯತೆಗಿಂತ ದೊಡ್ಡ ಧರ್ಮವಿಲ್ಲ ಎಂಬುದು ನಾಣ್ಣುಡಿ. ಸಮಾಜದಲ್ಲಿನ ಸತ್ತು‌ಹೋದ ಕೆಲ ಮನಸ್ಸುಗಳ ನಡುವೆ ಜೀವಂತ ಶವಗಳಾಗುವ ಬದಲು ನಮ್ಮಿಂದ ಸಮಾಜಕ್ಕೇನಾದರೂ ಸಹಾಯ ಮಾಡಬಹುದು ಎಂಬ ಸಮಾನ ಮನಸ್ಕರ ಗುಂಪೊಂದು ಯೋಚಿಸಿದ ಫಲವಾಗಿ ಹುಟ್ಟಿಕೊಂಡ ಸಂಸ್ಥೆಯೇ ಯುವ ತೇಜಸ್ಸು ಟ್ರಸ್ಟ್. ಸಾಮಾಜಿಕ ಜಾಲತಾಣದ‌ ಬಳಕೆಯಿಂದ ಯುವ ಸಮೂಹ ಕೆಡುಕಿನತ್ತ ಸಾಗುತ್ತಿದೆ ಎಂಬ ಕಾಲಘಟ್ಟದಲ್ಲಿ ಸಮಾಜದಲ್ಲಿನ ಅಶಕ್ತರ ಪಾಲಿಗೆ ಕಿಂಚಿತ್ತಾದರೂ ಸಹಾಯ ಮಾಡುವ ಆಶಯದೊಂದಿಗೆ ಆರಂಭವಾದ ಯುವ ತೇಜಸ್ಸು ಸಂಸ್ಥೆ ಬಳಿಕ ಹೆಮ್ಮರವಾಗಿ ಬೆಳೆದಿದ್ದು ಈಗ ಇತಿಹಾಸ.

Advertisement

ಯುವ ಜನಾಂಗವನ್ನೇ ಸೇತುವೆಯನ್ನಾಗಿಸಿಕೊಂಡು ಸಮಾಜದ ಅಸಹಾಯಕರ ಕಷ್ಟಗಳಿಗೆ ನೆರವಾಗುತ್ತಾ ಅವರ ಜೀವನದಲ್ಲಿ ನಗುವಿನ ದಡ ಸೇರಿಸುವಲ್ಲಿ ಯುವ ತೇಜಸ್ಸು ಟ್ರಸ್ಟ್ ಇದುವರೆಗೆ ತನ್ನಿಂದಾದ ನೆರವು ಕಾರ್ಯವನ್ನು ಯಶಸ್ವಿಯಾಗಿ ನಿಭಾಯಿಸಿದೆ. ಒಂದಿಷ್ಟು ಸಮಾಜಕ್ಕಾಗಿ ಎಂಬ ಧ್ಯೇಯದೊಂದಿಗೆ ತನ್ನಿಂದಾದ ಅಳಿಲು ಸೇವೆಯನ್ನು ಸಮಾಜಕ್ಕೆ ನೀಡುತ್ತ ಕಳೆದ ಎಂಟು ವರ್ಷಗಳಿಂದ ತನ್ನದೇ ಕಾರ್ಯದಲ್ಲಿ ಯುವ ತೇಜಸ್ಸು ಬಳಗ ತೊಡಗಿದೆ‌.

ಬಡತನದ ನೋವನ್ನು ಅರಿತ ಬಡ ಸದಸ್ಯರಿಂದ ಸಮಾಜದ ಕಟ್ಟ ಕಡೆಯ ವ್ಯಕ್ತಿಗಳ ಸೇವೆ ಮಾಡುವ ಸಲುವಾಗಿ ಆರಂಭಗೊಂಡ ಸಂಸ್ಥೆ ದಾನಿಗಳಿಂದ ಪ್ರತಿತಿಂಗಳಿಗೆ ಒಂದಿಷ್ಟು ಸಮಾಜಕ್ಕಾಗಿ ಮೀಸಲಿಡಿ ಎಂಬ ಭಿನ್ನಹದೊಂದಿಗೆ ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಫೇಸ್ ಬುಕ್ ಗ್ರೂಪ್ ಗಳಲ್ಲಿ ತನ್ನ ಸೇವಾ ವೈಖರಿಯನ್ನು ಬಿತ್ತರಿಸುತ್ತ ಅಂತೆಯೇ ಹಣಕಾಸಿನ ವ್ಯವಹಾರವನ್ನು ಪಾರದರ್ಶಕವಾಗಿ ತಿಂಗಳಿಗೊಮ್ಮೆ ವರದಿ ನೀಡಿಕೊಂಡು ಅಪಾರ ಜನ ಮನ್ನಣೆಗೆ ಪಾತ್ರವಾಗಿದೆ ಯುವ ತೇಜಸ್ಸು ಬಳಗ. ನಿರಂತರವಾಗಿ ದಕ್ಷಿಣ ಕನ್ನಡ, ಮಡಿಕೇರಿ, ಕಾಸರಗೋಡು, ಉಡುಪಿ ಜಿಲ್ಲೆಯಾದ್ಯಂತ ಬಡ ಕುಟುಂಬದ ವಿದ್ಯಾರ್ಥಿಗಳಿಗೆ, ವಯೋವೃದ್ಧರಿಗೆ ,ಶಿಕ್ಷಣ ಸಂಸ್ಥೆಗಳಿಗೆ, ಅನಾರೋಗ್ಯ ಪೀಡಿತರಿಗೆ ಸಹಾಯಧನ, ವೈದ್ಯಕೀಯ ಶಿಬಿರ, ರಕ್ತದಾನ ಶಿಬಿರ, ಧಾರ್ಮಿಕ ಕ್ಷೇತ್ರಗಳಲ್ಲಿ ಕರಸೇವೆ, ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಪ್ರದೇಶದಲ್ಲಿ ಸದಸ್ಯರಿಂದ ಸಾಮೂಹಿಕ ಶ್ರಮದಾನ ನಡೆಸುತ್ತಾ ಬಂದಿದೆ.

Advertisement

ಯುವ ತೇಜಸ್ಸು ಸಂಸ್ಥೆಯ ಸಾಮಾಜಿಕ ಸೇವೆಯನ್ನು ಪ್ರೋತ್ಸಾಹಿಸುವ ಸದಸ್ಯರು ದೇಶ ವಿದೇಶಗಳಲ್ಲಿ ಉದ್ಯೋಗದಲ್ಲಿರುವ, ಊರಿನ ಪರೋಪಕಾರಿ ಮನೋಭಾವ ಹೊಂದಿರುವ ಸಹೃದಯಿ ದಾನಿಗಳ ಸಹಕಾರದಿಂದ, ಬೆಂಬಲದಿಂದ ಇದುವರೆಗೆ 134 ಯೋಜನೆಯ ಮೂಲಕ ಸುಮಾರು ನಲವತ್ತು ಲಕ್ಷಕ್ಕೂ ಅಧಿಕ ಮೊತ್ತಗಳಷ್ಟು ಧನಸಹಾಯವನ್ನು ನೊಂದ ಕುಟುಂಬಗಳಿಗೆ ನೀಡಿದ್ದು, ತನ್ನ ಸೇವೆಯನ್ನು ವಿಸ್ತರಿಸುತ್ತಾ ಯುವ ತೇಜಸ್ಸು ಸಂಸ್ಥೆಯು ಯುವ ಜನಾಂಗದ ಚಿತ್ತವನ್ನು ತನ್ನತ್ತ ಸೆಳೆಯುತ್ತಾ ಸಾಗುತ್ತಿದ್ದು ಹಂತಹಂತವಾಗಿ ಬೆಳವಣಿಗೆಯತ್ತ ಮುಖ ಮಾಡಿದೆ.

ಕಳೆದ ವರ್ಷದಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆರಂಭಗೊಂಡ ಯುವ ತೇಜಸ್ಸು ಅಂಬ್ಯುಲೆನ್ಸ್ ಕೂಡ ಸಮಾಜಕ್ಕೆ ಈ ಸಂಸ್ಥೆ ನೀಡಿದ ಕೊಡುಗೆ. ಅಪಘಾತ ಅಥವಾ ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸುರಕ್ಷಿತವಾಗಿ ಸೇರಿಸುವ ಮಹತ್ತರವಾದ ಕಾರ್ಯ ನಿರ್ವಹಿಸುತ್ತಾ ಬರುತ್ತಿದೆ. ತೀರಾ ಅಗತ್ಯ ಎನಿಸುವ ಕುಟುಂಬಗಳಿಗೆ ಉಚಿತ ಸೇವೆ ನೀಡುತ್ತಾ, ಅತ್ಯಲ್ಪ ಗೌರವಧನ ಪಡೆದು ಉತ್ಕೃಷ್ಟ ಸೇವೆ ನೀಡುವಲ್ಲಿ ಯುವ ತೇಜಸ್ಸು ಅಂಬ್ಯುಲೆನ್ಸ್ ಯಶಸ್ವಿಯಾಗಿದೆ.

Advertisement

ಇದೀಗ ಹೊಸ ಯೋಜನೆಯ ಪ್ರಕಾರ,  ನಿಮ್ಮ ಊರಿನ ಅಪಾಯಕಾರಿ ಮರದ ಕಾಲು ಸಂಕದ ಪೋಟೋ ಸಮೇತ ವಿವರಗಳನ್ನು ಯುವ ತೇಜಸ್ಸು ಸಂಸ್ಥೆಗೆ ನೀಡಿದಲ್ಲಿ, ಅತೀ ಅಗತ್ಯ ಎನಿಸುವ ಸ್ಥಳಗಳಿಗೆ ಮೊದಲ ಪ್ರಾಶಸ್ತ್ಯ ನೀಡಿ, ಜಿಲ್ಲೆಯ ಪ್ರತಿ ಭಾಗದ ಮರದ ಅಪಾಯಕಾರಿ ಕಾಲುಸಂಕಗಳನ್ನು ತೆರವುಗೊಳಿಸಿ ಉತ್ತಮವಾದ ಕಬ್ಬಿಣದ ಕಾಲುಸಂಕ ನಿರ್ಮಾಣಕ್ಕೆ ಯುವ ತೇಜಸ್ಸು ಬಳಗ ಮುಂದಾಗಲಿದೆ‌.

ಕಳುಹಿಸಿಕೊಡಬೇಕಾದ ವಿವರಗಳು: ಊರಿನ ಹೆಸರು, ಕಾಲುಸಂಕದ ಸದ್ಯದ ಫೋಟೋ , ಕಾಲುಸಂಕದ ವಿವರ , ಊರಿನಲ್ಲಿರುವ ಮನೆಯ ಸಂಖ್ಯೆ, ಸಂಪರ್ಕಕ್ಕಾಗಿ ಮೊಬೈಲ್ ಸಂಖ್ಯೆ.

Advertisement
ಅಂಚೆಯಲ್ಲಿ ಪತ್ರ ಕಳಿಸಿಕೊಡಬೇಕಾದ ವಿಳಾಸ : ಬಾಲಾಜಿ ಕೊಬ್ಬರಿ ಎಣ್ಣೆ ಮಿಲ್ , ಕಾಶಿಕಟ್ಟೆ, ಕುಕ್ಕೆ ಸುಬ್ರಹ್ಮಣ್ಯ , ಕಡಬ ತಾಲೂಕು ದ.ಕ – 574238

ವಾಟ್ಸಪ್ ಮಾಡಬೇಕಾದ ನಂಬರ್: 94801 77770 , 88610 74919, 76187 46761, 91085 87145, 80888 37771

Advertisement
ನೆರವಾಗುವ ದಾನಿಗಳಿಗಾಗಿ..
  • 9740206706
  • ಸಂಸ್ಥೆಯ ಬ್ಯಾಂಕ್ ಖಾತೆ ಸಂಖ್ಯೆ:-
  • ಖಾತೆ ಹೆಸರು:- YUVA TEJASSU
  • ಖಾತೆ ಸಂಖ್ಯೆ:- 01782200083523
  • IFSC CODE:- CNRB0010178
  • Canara Bank, Panja Branch {Sullia Tq}
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

4 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

4 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

5 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

5 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

5 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

5 hours ago