ಮೊದಲ ಬಾರಿಗೆ ರಾಜ್ಯದ ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ | ಬಜೆಟ್‌ನಲ್ಲಿ ಘೋಷಣೆ

February 16, 2024
1:16 PM

ಕಡಲಿಗಿಳಿದು ಮೀನು ಹಿಡಿಯುವ ಮೀನುಗಾರರ ಹಿತರಕ್ಷಣೆಗೆ ಸರ್ಕಾರ ಪ್ರಮುಖ ಆದ್ಯತೆ ನೀಡಿದೆ. ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದು, ಇದು ರಾಜ್ಯದಲ್ಲೇ ಪ್ರಪ್ರಥಮವಾಗಿದೆ.

ಇಂದು ತಮ್ಮ 15ನೇ ಬಜಟ್‌ (Karnataka Budget 2024) ಮಂಡನೆ ಮಾಡಿದ ಅವರು, ಮೀನುಗಾರರ ರಕ್ಷಣೆಗೆಂದು ಸಮುದ್ರ ಅಂಬ್ಯುಲೆನ್ಸ್ (Sea Ambulance) ಖರೀದಿಗೆ 7 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು.

ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಮತ್ಸ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ ರಾಜ್ಯದ ಪಾಲು 3,000 ರೂ ಗಳಿಗೆ ಹೆಚ್ಚಳ ಮಾಡುವುದಾಗಿ ಸಿಎಂ ತಿಳಿಸಿದರು. ವಿವಿಧ ವಸತಿ ಯೋಜನೆಗಳಡಿ 10,000 ವಸತಿರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಸಹಾಯಧನ ನೀಡಲಾಗುವುದು ಎಂದರು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror