ಕಡಲಿಗಿಳಿದು ಮೀನು ಹಿಡಿಯುವ ಮೀನುಗಾರರ ಹಿತರಕ್ಷಣೆಗೆ ಸರ್ಕಾರ ಪ್ರಮುಖ ಆದ್ಯತೆ ನೀಡಿದೆ. ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದು, ಇದು ರಾಜ್ಯದಲ್ಲೇ ಪ್ರಪ್ರಥಮವಾಗಿದೆ.
ಇಂದು ತಮ್ಮ 15ನೇ ಬಜಟ್ (Karnataka Budget 2024) ಮಂಡನೆ ಮಾಡಿದ ಅವರು, ಮೀನುಗಾರರ ರಕ್ಷಣೆಗೆಂದು ಸಮುದ್ರ ಅಂಬ್ಯುಲೆನ್ಸ್ (Sea Ambulance) ಖರೀದಿಗೆ 7 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು.
ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಮತ್ಸ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ ರಾಜ್ಯದ ಪಾಲು 3,000 ರೂ ಗಳಿಗೆ ಹೆಚ್ಚಳ ಮಾಡುವುದಾಗಿ ಸಿಎಂ ತಿಳಿಸಿದರು. ವಿವಿಧ ವಸತಿ ಯೋಜನೆಗಳಡಿ 10,000 ವಸತಿರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಸಹಾಯಧನ ನೀಡಲಾಗುವುದು ಎಂದರು.
– ಅಂತರ್ಜಾಲ ಮಾಹಿತಿ
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…