ಕಡಲಿಗಿಳಿದು ಮೀನು ಹಿಡಿಯುವ ಮೀನುಗಾರರ ಹಿತರಕ್ಷಣೆಗೆ ಸರ್ಕಾರ ಪ್ರಮುಖ ಆದ್ಯತೆ ನೀಡಿದೆ. ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದು, ಇದು ರಾಜ್ಯದಲ್ಲೇ ಪ್ರಪ್ರಥಮವಾಗಿದೆ.
ಇಂದು ತಮ್ಮ 15ನೇ ಬಜಟ್ (Karnataka Budget 2024) ಮಂಡನೆ ಮಾಡಿದ ಅವರು, ಮೀನುಗಾರರ ರಕ್ಷಣೆಗೆಂದು ಸಮುದ್ರ ಅಂಬ್ಯುಲೆನ್ಸ್ (Sea Ambulance) ಖರೀದಿಗೆ 7 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು.
ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಮತ್ಸ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ ರಾಜ್ಯದ ಪಾಲು 3,000 ರೂ ಗಳಿಗೆ ಹೆಚ್ಚಳ ಮಾಡುವುದಾಗಿ ಸಿಎಂ ತಿಳಿಸಿದರು. ವಿವಿಧ ವಸತಿ ಯೋಜನೆಗಳಡಿ 10,000 ವಸತಿರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಸಹಾಯಧನ ನೀಡಲಾಗುವುದು ಎಂದರು.
– ಅಂತರ್ಜಾಲ ಮಾಹಿತಿ
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…