ಮುಂಗಾರು ಪ್ರವೇಶಿಸಿ ಕೇವಲ ಒಂದು ವಾರ ಸುರಿದ ಮಳೆ ಮತ್ತೆ ಎಲ್ಲಿ ಹೋಯ್ತು ಅನ್ನೋದೆ ಗೊತ್ತಾಗಲಿಲ್ಲ. ಅದಾಗಿ ಸುಮಾರು ಎರಡು ತಿಂಗಳ ನಂತರ ಕರಾವಳಿ, ಮಲೆನಾಡಿನಲ್ಲಿಮಳೆಯ ಆರ್ಭಟ ಆರಂಭವಾಗಿದೆ. ಕಳೆದ 4-5 ದಿನಗಳಿಂದ ಕರಾವಳಿ, ಮಲೆನಾಡು ಸೇರಿದಂತೆ ಬೆಂಗಳೂರು ಸುತ್ತ ಮುತ್ತ ಮಳೆಯಾಗುತ್ತಿದೆ. ಹಾಗೆ ಮುಂದಿನ 24 ಗಂಟೆಗಳಲ್ಲಿ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮಳೆರಾಯನ ಅಬ್ಬರ ಇನ್ನಷ್ಟು ಮುಂದುವರೆಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆ, ರಾತ್ರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿ ಹಲವೆಡೆ ಮಳೆಯಾಗಲಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಎರಡು ದಿನ ಗುಡುಗು ಸಹಿತ ಮಳೆಯಾಗಲಿದ್ದು, ಹಬ್ಬದ ಸಂಭ್ರಮಕ್ಕೆ ವರುಣ ಅಡ್ಡಿಯಾಗುವ ಸಾಧ್ಯತೆಗಳಿವೆ. ಸಿಲಿಕಾನ್ ಸಿಟಿಯಲ್ಲಿ ಮುಂಜಾನೆ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದೆ. ಬೆಂಗಳೂರಲ್ಲಿ ಮಧ್ಯಾಹ್ನವೇ ಭಾರೀ ಮಳೆಯಾಗುತ್ತಿದೆ. ಇನ್ನೂ 2 ದಿನ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
– ಅಂತರ್ಜಾಲ ಮಾಹಿತಿ
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…