ರಕ್ಷಿತಾರಣ್ಯದಿಂದ ಅಕ್ರಮವಾಗಿ ಮರ ಕಡಿದ ಪ್ರಕರಣ | ನಾಲ್ವರ ಬಂಧನ.

July 18, 2022
11:39 PM

ಬೆಳ್ತಂಗಡಿ ತಾಲೂಕಿನ  ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮವಾಗಿ  ಬಣ್ಪು ಮತ್ತು ಹೆಬ್ಬಲಸು ಮರ ಕಡಿತದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖಾ ಸಿಬಂದಿಗಳು ನಾಲ್ವರನ್ನು ಬಂಧಿಸಿದ್ದಾರೆ.

Advertisement
Advertisement

ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್ (51) ಹಾಗೂ ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರ (25)‌ಭಾನುವಾರ ಬಂಧಿಸಿ, ತಲೆ ಮರೆಸಿಕೊಂಡಿದ್ದ ಶಿಬಾಜೆಯ ಉಮೇಶ್ (35), ರೆಖ್ಯದ ವಿಜಯ್‌ (45)ನನ್ನು ಸೋಮವಾರ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಉಪ ವಲಯರಣ್ಯಾಧಿಕಾರಿ ಸಂತೋಷ್ ತಡ್ಲಗಿ ಹಾಗೂ ಅರಣ್ಯ ರಕ್ಷಕ ನಿಂಗಪ್ಪ ಅವಾರಿ, ಪ್ರಶಾಂತ್ ಮಾಳಗಿ, ರಸೂಲ್, ಸುನಿಲ್ ನಾಯಕ್, ಅರಣ್ಯ ವೀಕ್ಷಕ ದಾಮೋದರ್, ವಾಹನ ಚಾಲಕ ಕಿಶೋರ್ ಬಾಗಿಯಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಉಪ್ಪಿನಂಗಡಿ ವಲಯಾರಣ್ಯಾದಿಕಾರಿ ಎದುರು ಹಾಜರುಪಡಿಸಲಾಗಿದ್ದು, ಸ್ಥಳದ ಮಹಜರು ನಡೆಸಿ ವಲಯಾರಣ್ಯಾಧಿಕಾರಿ ಮಧುಸೂದನ್ ಮತ್ತು ಸಿಬ್ಬಂದಿ ವರ್ಗ ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ
May 16, 2025
9:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group