ಬೆಳ್ತಂಗಡಿ ತಾಲೂಕಿನ ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮವಾಗಿ ಬಣ್ಪು ಮತ್ತು ಹೆಬ್ಬಲಸು ಮರ ಕಡಿತದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖಾ ಸಿಬಂದಿಗಳು ನಾಲ್ವರನ್ನು ಬಂಧಿಸಿದ್ದಾರೆ.
ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್ (51) ಹಾಗೂ ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರ (25)ಭಾನುವಾರ ಬಂಧಿಸಿ, ತಲೆ ಮರೆಸಿಕೊಂಡಿದ್ದ ಶಿಬಾಜೆಯ ಉಮೇಶ್ (35), ರೆಖ್ಯದ ವಿಜಯ್ (45)ನನ್ನು ಸೋಮವಾರ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಉಪ ವಲಯರಣ್ಯಾಧಿಕಾರಿ ಸಂತೋಷ್ ತಡ್ಲಗಿ ಹಾಗೂ ಅರಣ್ಯ ರಕ್ಷಕ ನಿಂಗಪ್ಪ ಅವಾರಿ, ಪ್ರಶಾಂತ್ ಮಾಳಗಿ, ರಸೂಲ್, ಸುನಿಲ್ ನಾಯಕ್, ಅರಣ್ಯ ವೀಕ್ಷಕ ದಾಮೋದರ್, ವಾಹನ ಚಾಲಕ ಕಿಶೋರ್ ಬಾಗಿಯಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಉಪ್ಪಿನಂಗಡಿ ವಲಯಾರಣ್ಯಾದಿಕಾರಿ ಎದುರು ಹಾಜರುಪಡಿಸಲಾಗಿದ್ದು, ಸ್ಥಳದ ಮಹಜರು ನಡೆಸಿ ವಲಯಾರಣ್ಯಾಧಿಕಾರಿ ಮಧುಸೂದನ್ ಮತ್ತು ಸಿಬ್ಬಂದಿ ವರ್ಗ ಮುಂದಿನ ಕ್ರಮ ಕೈಗೊಂಡಿದ್ದಾರೆ.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…