ಬೆಳ್ತಂಗಡಿ ತಾಲೂಕಿನ ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮವಾಗಿ ಬಣ್ಪು ಮತ್ತು ಹೆಬ್ಬಲಸು ಮರ ಕಡಿತದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖಾ ಸಿಬಂದಿಗಳು ನಾಲ್ವರನ್ನು ಬಂಧಿಸಿದ್ದಾರೆ.
ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್ (51) ಹಾಗೂ ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರ (25)ಭಾನುವಾರ ಬಂಧಿಸಿ, ತಲೆ ಮರೆಸಿಕೊಂಡಿದ್ದ ಶಿಬಾಜೆಯ ಉಮೇಶ್ (35), ರೆಖ್ಯದ ವಿಜಯ್ (45)ನನ್ನು ಸೋಮವಾರ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಉಪ ವಲಯರಣ್ಯಾಧಿಕಾರಿ ಸಂತೋಷ್ ತಡ್ಲಗಿ ಹಾಗೂ ಅರಣ್ಯ ರಕ್ಷಕ ನಿಂಗಪ್ಪ ಅವಾರಿ, ಪ್ರಶಾಂತ್ ಮಾಳಗಿ, ರಸೂಲ್, ಸುನಿಲ್ ನಾಯಕ್, ಅರಣ್ಯ ವೀಕ್ಷಕ ದಾಮೋದರ್, ವಾಹನ ಚಾಲಕ ಕಿಶೋರ್ ಬಾಗಿಯಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಉಪ್ಪಿನಂಗಡಿ ವಲಯಾರಣ್ಯಾದಿಕಾರಿ ಎದುರು ಹಾಜರುಪಡಿಸಲಾಗಿದ್ದು, ಸ್ಥಳದ ಮಹಜರು ನಡೆಸಿ ವಲಯಾರಣ್ಯಾಧಿಕಾರಿ ಮಧುಸೂದನ್ ಮತ್ತು ಸಿಬ್ಬಂದಿ ವರ್ಗ ಮುಂದಿನ ಕ್ರಮ ಕೈಗೊಂಡಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…