ಬೆಳ್ತಂಗಡಿ ತಾಲೂಕಿನ ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮವಾಗಿ ಬಣ್ಪು ಮತ್ತು ಹೆಬ್ಬಲಸು ಮರ ಕಡಿತದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖಾ ಸಿಬಂದಿಗಳು ನಾಲ್ವರನ್ನು ಬಂಧಿಸಿದ್ದಾರೆ.
ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್ (51) ಹಾಗೂ ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರ (25)ಭಾನುವಾರ ಬಂಧಿಸಿ, ತಲೆ ಮರೆಸಿಕೊಂಡಿದ್ದ ಶಿಬಾಜೆಯ ಉಮೇಶ್ (35), ರೆಖ್ಯದ ವಿಜಯ್ (45)ನನ್ನು ಸೋಮವಾರ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಉಪ ವಲಯರಣ್ಯಾಧಿಕಾರಿ ಸಂತೋಷ್ ತಡ್ಲಗಿ ಹಾಗೂ ಅರಣ್ಯ ರಕ್ಷಕ ನಿಂಗಪ್ಪ ಅವಾರಿ, ಪ್ರಶಾಂತ್ ಮಾಳಗಿ, ರಸೂಲ್, ಸುನಿಲ್ ನಾಯಕ್, ಅರಣ್ಯ ವೀಕ್ಷಕ ದಾಮೋದರ್, ವಾಹನ ಚಾಲಕ ಕಿಶೋರ್ ಬಾಗಿಯಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಉಪ್ಪಿನಂಗಡಿ ವಲಯಾರಣ್ಯಾದಿಕಾರಿ ಎದುರು ಹಾಜರುಪಡಿಸಲಾಗಿದ್ದು, ಸ್ಥಳದ ಮಹಜರು ನಡೆಸಿ ವಲಯಾರಣ್ಯಾಧಿಕಾರಿ ಮಧುಸೂದನ್ ಮತ್ತು ಸಿಬ್ಬಂದಿ ವರ್ಗ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…