ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಕೇಸು ದಾಖಲಿಸಿದ್ದಾರೆ. ಆರೋಪಿಗಳಾದ ಕೊಳ್ತಿಗೆ ಗ್ರಾಮದ ಶೇಡಿಗುರಿ ವಾಸಿ ಧನಂಜಯ(38 ) ಮತ್ತು ಜಯ(38 ) ರವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯವು ಆರೋಪಿಗಳಿಗೆ ಜುಲೈ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿಗಳು ಮನೆ ಬಳಿ ಬಂದಿದ್ದ ಹೆಬ್ಬಾವನ್ನು ಹಿಡಿದು ಕಟ್ಟಡದ ಬಾಗಿಲ ಬೀಗಕ್ಕೆ ಕಟ್ಟಿದ್ದು ಹಾವನ್ನು ಕೊಂದಿದ್ದರು. ಹೆಬ್ಭಾವನ್ನು ಕೊಲ್ಲುವುದು 1972 ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಜಾಮೀನು ರಹಿತ ಅಪರಾಧವಾಗುತ್ತದೆ. ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯವರಾದ ದಿನೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕಾರ್ಯಪ್ಪ ಅವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿಗಳಾದ ಕಿರಣ್ ಬಿ. ಎಮ್. ಉಪ ವಲಯ ಅರಣ್ಯಾಧಿಕಾರಿಗಳಾದ ಲೋಕೇಶ್ ಅರಣ್ಯ ರಕ್ಷಕರುಗಳಾದ ದೀಪಕ ,ನಿಂಗರಾಜ್ ಮತ್ತು ಇಲಾಖೆ ವಾಹನ ಚಾಲಕರಾದ ಜಗದೀಶ್ ಪಾಲ್ಗೊಂಡಿದ್ದರು. ತನಿಖೆ ಪ್ರಗತಿಯಲ್ಲಿದೆ.
ಮಿಲ್ಲೆಟ್ಸ್ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…