ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಕೇಸು ದಾಖಲಿಸಿದ್ದಾರೆ. ಆರೋಪಿಗಳಾದ ಕೊಳ್ತಿಗೆ ಗ್ರಾಮದ ಶೇಡಿಗುರಿ ವಾಸಿ ಧನಂಜಯ(38 ) ಮತ್ತು ಜಯ(38 ) ರವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯವು ಆರೋಪಿಗಳಿಗೆ ಜುಲೈ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿಗಳು ಮನೆ ಬಳಿ ಬಂದಿದ್ದ ಹೆಬ್ಬಾವನ್ನು ಹಿಡಿದು ಕಟ್ಟಡದ ಬಾಗಿಲ ಬೀಗಕ್ಕೆ ಕಟ್ಟಿದ್ದು ಹಾವನ್ನು ಕೊಂದಿದ್ದರು. ಹೆಬ್ಭಾವನ್ನು ಕೊಲ್ಲುವುದು 1972 ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಜಾಮೀನು ರಹಿತ ಅಪರಾಧವಾಗುತ್ತದೆ. ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯವರಾದ ದಿನೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕಾರ್ಯಪ್ಪ ಅವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿಗಳಾದ ಕಿರಣ್ ಬಿ. ಎಮ್. ಉಪ ವಲಯ ಅರಣ್ಯಾಧಿಕಾರಿಗಳಾದ ಲೋಕೇಶ್ ಅರಣ್ಯ ರಕ್ಷಕರುಗಳಾದ ದೀಪಕ ,ನಿಂಗರಾಜ್ ಮತ್ತು ಇಲಾಖೆ ವಾಹನ ಚಾಲಕರಾದ ಜಗದೀಶ್ ಪಾಲ್ಗೊಂಡಿದ್ದರು. ತನಿಖೆ ಪ್ರಗತಿಯಲ್ಲಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…