ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಕೇಸು ದಾಖಲಿಸಿದ್ದಾರೆ. ಆರೋಪಿಗಳಾದ ಕೊಳ್ತಿಗೆ ಗ್ರಾಮದ ಶೇಡಿಗುರಿ ವಾಸಿ ಧನಂಜಯ(38 ) ಮತ್ತು ಜಯ(38 ) ರವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯವು ಆರೋಪಿಗಳಿಗೆ ಜುಲೈ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿಗಳು ಮನೆ ಬಳಿ ಬಂದಿದ್ದ ಹೆಬ್ಬಾವನ್ನು ಹಿಡಿದು ಕಟ್ಟಡದ ಬಾಗಿಲ ಬೀಗಕ್ಕೆ ಕಟ್ಟಿದ್ದು ಹಾವನ್ನು ಕೊಂದಿದ್ದರು. ಹೆಬ್ಭಾವನ್ನು ಕೊಲ್ಲುವುದು 1972 ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಜಾಮೀನು ರಹಿತ ಅಪರಾಧವಾಗುತ್ತದೆ. ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯವರಾದ ದಿನೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕಾರ್ಯಪ್ಪ ಅವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿಗಳಾದ ಕಿರಣ್ ಬಿ. ಎಮ್. ಉಪ ವಲಯ ಅರಣ್ಯಾಧಿಕಾರಿಗಳಾದ ಲೋಕೇಶ್ ಅರಣ್ಯ ರಕ್ಷಕರುಗಳಾದ ದೀಪಕ ,ನಿಂಗರಾಜ್ ಮತ್ತು ಇಲಾಖೆ ವಾಹನ ಚಾಲಕರಾದ ಜಗದೀಶ್ ಪಾಲ್ಗೊಂಡಿದ್ದರು. ತನಿಖೆ ಪ್ರಗತಿಯಲ್ಲಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…