ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಕೇಸು ದಾಖಲಿಸಿದ್ದಾರೆ. ಆರೋಪಿಗಳಾದ ಕೊಳ್ತಿಗೆ ಗ್ರಾಮದ ಶೇಡಿಗುರಿ ವಾಸಿ ಧನಂಜಯ(38 ) ಮತ್ತು ಜಯ(38 ) ರವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯವು ಆರೋಪಿಗಳಿಗೆ ಜುಲೈ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿಗಳು ಮನೆ ಬಳಿ ಬಂದಿದ್ದ ಹೆಬ್ಬಾವನ್ನು ಹಿಡಿದು ಕಟ್ಟಡದ ಬಾಗಿಲ ಬೀಗಕ್ಕೆ ಕಟ್ಟಿದ್ದು ಹಾವನ್ನು ಕೊಂದಿದ್ದರು. ಹೆಬ್ಭಾವನ್ನು ಕೊಲ್ಲುವುದು 1972 ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಜಾಮೀನು ರಹಿತ ಅಪರಾಧವಾಗುತ್ತದೆ. ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯವರಾದ ದಿನೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕಾರ್ಯಪ್ಪ ಅವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿಗಳಾದ ಕಿರಣ್ ಬಿ. ಎಮ್. ಉಪ ವಲಯ ಅರಣ್ಯಾಧಿಕಾರಿಗಳಾದ ಲೋಕೇಶ್ ಅರಣ್ಯ ರಕ್ಷಕರುಗಳಾದ ದೀಪಕ ,ನಿಂಗರಾಜ್ ಮತ್ತು ಇಲಾಖೆ ವಾಹನ ಚಾಲಕರಾದ ಜಗದೀಶ್ ಪಾಲ್ಗೊಂಡಿದ್ದರು. ತನಿಖೆ ಪ್ರಗತಿಯಲ್ಲಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…