ರಾಜ್ಯದ ಎಲ್ಲಾ ಅರಣ್ಯ ಪ್ರದೇಶದೊಳಗೆ ದನ-ಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಬೆಳೆಯದೆ, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ. ಸಾಕು ಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗಲಿದೆ. ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಉಲ್ಲೇಖಿಸಿದ್ದಾರೆ. ಅರಣ್ಯ ಸಂವರ್ಧನೆಯಾಗದಿದ್ದರೆ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳವಾಗಲಿದೆ. ಹೀಗಾಗಿ ಕೂಡಲೇ ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ಸೂಚಿಸಿದ್ದಾರೆ.
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…
ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…
ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…