ರಾಜ್ಯದ ಎಲ್ಲಾ ಅರಣ್ಯ ಪ್ರದೇಶದೊಳಗೆ ದನ-ಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಬೆಳೆಯದೆ, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ. ಸಾಕು ಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗಲಿದೆ. ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಉಲ್ಲೇಖಿಸಿದ್ದಾರೆ. ಅರಣ್ಯ ಸಂವರ್ಧನೆಯಾಗದಿದ್ದರೆ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳವಾಗಲಿದೆ. ಹೀಗಾಗಿ ಕೂಡಲೇ ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ಸೂಚಿಸಿದ್ದಾರೆ.
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…