ರಾಜ್ಯದ ಎಲ್ಲಾ ಅರಣ್ಯ ಪ್ರದೇಶದೊಳಗೆ ದನ-ಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಬೆಳೆಯದೆ, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ. ಸಾಕು ಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗಲಿದೆ. ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಉಲ್ಲೇಖಿಸಿದ್ದಾರೆ. ಅರಣ್ಯ ಸಂವರ್ಧನೆಯಾಗದಿದ್ದರೆ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳವಾಗಲಿದೆ. ಹೀಗಾಗಿ ಕೂಡಲೇ ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ಸೂಚಿಸಿದ್ದಾರೆ.
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…