ಹಬ್ಬದ ದಿನ 2 ಲಕ್ಷ ಸಸಿ ವಿತರಿಸಿದ ಅರಣ್ಯ ಇಲಾಖೆ

April 5, 2025
8:06 AM

ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಸಿರು ಹೊದಿಕೆಯನ್ನು ಹೆಚ್ಚಿಸುವ ಸಲುವಾಗಿ ಅರಣ್ಯ ಇಲಾಖೆಯು ಹಬ್ಬದ ದಿನದಂದು ಸಸಿಗಳನ್ನು ವಿತರಿಸುವ ಪ್ರಯತ್ನ ಮಾಡಿದೆ. ಈ ಬಾರಿ ಈದ್-ಉಲ್-ಫಿತರ್‌ನಲ್ಲಿ ಸಾರ್ವಜನಿಕರಿಗೆ ವಿವಿಧ ಜಾತಿಯ ಸುಮಾರು 2 ಲಕ್ಷ ಸಸಿಗಳನ್ನು ಉಚಿತವಾಗಿ ವಿತರಿಸಿತು.……..ಮುಂದೆ ಓದಿ…..

Advertisement
Advertisement

ಈದ್ ನಮಾಜ್ ನಂತರ ಈದ್ಗಾಗಳು ಮತ್ತು ಮಸೀದಿಗಳ ಬಳಿ ಸಸಿಗಳನ್ನು ವಿತರಿಸಿತು, ಇದರಲ್ಲಿ ಸಮುದಾಯದ ಎಲ್ಲರೂ ಆಸಕ್ತಿಯಿಂದ ಭಾಗವಹಿಸಿದರು.ಅಲ್ಲಿನ ಅರಣ್ಯ ಸಚಿವ ಜಾವೇದ್ ಅಹ್ಮದ್ ರಾಣಾ ಅವರು ಸಸಿ ವಿತರಣೆಯನ್ನು ಆಯೋಜಿಸುವಲ್ಲಿ ಅರಣ್ಯ ಅಧಿಕಾರಿಗಳ ಪ್ರಯತ್ನಗಳನ್ನು ಶ್ಲಾಘಿಸಿದರು, ಈ ಉಪಕ್ರಮವು ಪರಿಸರ ಸುಸ್ಥಿರತೆ ಮತ್ತು ಅರಣ್ಯೀಕರಣದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ ಎಂದು  ಹೇಳಿದರು. ಜನರು ತಮ್ಮ ಈದ್ ಆಚರಣೆಯ ಭಾಗವಾಗಿ ಗಿಡಗಳನ್ನು ನೆಡುವ ಮೂಲಕ ಹಬ್ಬವನ್ನು ಶಾಶ್ವತವಾಗಿರಿಸಬೇಕಯ ಹಾಗೂ ಆ ನೆನಪಲ್ಲಿ  ಹಸಿರು ಮತ್ತು ಆರೋಗ್ಯಕರ ಪರಿಸರಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದರು.ಭವಿಷ್ಯದ ಹಸಿರೀಕರಣ ಯೋಜನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅವರು ಕರೆ ನೀಡಿದರು.

ಹವಾಮಾನ ಬದಲಾವಣೆಯನ್ನು ಎದುರಿಸುವಲ್ಲಿ ಮತ್ತು  ಹಸಿರನ್ನು ಹೆಚ್ಚಿಸುವಲ್ಲಿ ಗಿಡ ನೆಡುವಿಕೆಯ ಮಹತ್ವದ ಬಗ್ಗೆ ಸ್ಥಳೀಯರಿಗೆ ಶಿಕ್ಷಣ ನೀಡುವುದು ಅಗತ್ಯವಾಗಿದೆ.  ಕಾಶ್ಮೀರದ ಈ ಯೋಜನೆಯು ದೇಶದ ಎಲ್ಲಾ ಕಡೆಗೂ ಅನ್ವಯಿಸಬಹುದಾದ ಯೋಜನೆ. ಹಬ್ಬದ ದಿನದಂದು ಕನಿಷ್ಟ ಗಿಡಗಳನ್ನು ವಿತರಿಸುವುದು ಅಥವಾ ಗಿಡ ನೆಡುವ ಯೋಜನೆಯನ್ನು ಜಾರಿ ಮಾಡಬಹುದಾಗಿದೆ. ಈ ಮೂಲಕ ಹವಾಮಾನದ ವೈಪರೀತ್ಯ, ಹವಮಾನ ಬದಲಾವಣೆಯಂತಹ ಪ್ರಮುಖವಾದ ಸವಾಲುಗಳನ್ನು ಎದುರಿಸಲು ಯೋಜನೆ ರೂಪಿಸಬಹುದಾಗಿದೆ. ಹೀಗಾಗಿ ರಾಜ್ಯದಲ್ಲೂ, ಈ ಬಗ್ಗೆ ಅರಣ್ಯ ಸಚಿವರು, ಇಲಾಖೆ ಯೋಚಿಸಬಹುದಾದ ಕಾರ್ಯಕ್ರಮ ಇದಾಗಿದೆ. ಹಸಿರುವ ಉಳಿಸಲು, ಹಬ್ಬ, ಹುಟ್ಟುಹಬ್ಬ ಸೇರಿದಂತೆ ವಿವಿಧ ದಿನಗಳಲ್ಲಿ ಗಿಡ ನೆಡುವ ಹಾಗೂ ಉಳಿಸುವ ವಿಶೇಷ ಯೋಜನೆಗಳ ಅನಿವಾರ್ಯತೆ ಇದೆ.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ | ಇಂದಿನಿಂದಲೇ ಮುಂಗಾರು ಆರಂಭ | 8 ದಿನ ಮುಂಚಿತವಾಗಿ ಆರಂಭವಾದ ಮಳೆಗಾಲ |
May 24, 2025
4:43 PM
by: ಮಹೇಶ್ ಪುಚ್ಚಪ್ಪಾಡಿ
ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ
May 24, 2025
11:10 AM
by: ದ ರೂರಲ್ ಮಿರರ್.ಕಾಂ
50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18
May 24, 2025
10:37 AM
by: The Rural Mirror ಸುದ್ದಿಜಾಲ
ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು
May 24, 2025
9:56 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group