ಹಬ್ಬದ ದಿನ 2 ಲಕ್ಷ ಸಸಿ ವಿತರಿಸಿದ ಅರಣ್ಯ ಇಲಾಖೆ

April 5, 2025
8:06 AM

ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಸಿರು ಹೊದಿಕೆಯನ್ನು ಹೆಚ್ಚಿಸುವ ಸಲುವಾಗಿ ಅರಣ್ಯ ಇಲಾಖೆಯು ಹಬ್ಬದ ದಿನದಂದು ಸಸಿಗಳನ್ನು ವಿತರಿಸುವ ಪ್ರಯತ್ನ ಮಾಡಿದೆ. ಈ ಬಾರಿ ಈದ್-ಉಲ್-ಫಿತರ್‌ನಲ್ಲಿ ಸಾರ್ವಜನಿಕರಿಗೆ ವಿವಿಧ ಜಾತಿಯ ಸುಮಾರು 2 ಲಕ್ಷ ಸಸಿಗಳನ್ನು ಉಚಿತವಾಗಿ ವಿತರಿಸಿತು.……..ಮುಂದೆ ಓದಿ…..

ಈದ್ ನಮಾಜ್ ನಂತರ ಈದ್ಗಾಗಳು ಮತ್ತು ಮಸೀದಿಗಳ ಬಳಿ ಸಸಿಗಳನ್ನು ವಿತರಿಸಿತು, ಇದರಲ್ಲಿ ಸಮುದಾಯದ ಎಲ್ಲರೂ ಆಸಕ್ತಿಯಿಂದ ಭಾಗವಹಿಸಿದರು.ಅಲ್ಲಿನ ಅರಣ್ಯ ಸಚಿವ ಜಾವೇದ್ ಅಹ್ಮದ್ ರಾಣಾ ಅವರು ಸಸಿ ವಿತರಣೆಯನ್ನು ಆಯೋಜಿಸುವಲ್ಲಿ ಅರಣ್ಯ ಅಧಿಕಾರಿಗಳ ಪ್ರಯತ್ನಗಳನ್ನು ಶ್ಲಾಘಿಸಿದರು, ಈ ಉಪಕ್ರಮವು ಪರಿಸರ ಸುಸ್ಥಿರತೆ ಮತ್ತು ಅರಣ್ಯೀಕರಣದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ ಎಂದು  ಹೇಳಿದರು. ಜನರು ತಮ್ಮ ಈದ್ ಆಚರಣೆಯ ಭಾಗವಾಗಿ ಗಿಡಗಳನ್ನು ನೆಡುವ ಮೂಲಕ ಹಬ್ಬವನ್ನು ಶಾಶ್ವತವಾಗಿರಿಸಬೇಕಯ ಹಾಗೂ ಆ ನೆನಪಲ್ಲಿ  ಹಸಿರು ಮತ್ತು ಆರೋಗ್ಯಕರ ಪರಿಸರಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದರು.ಭವಿಷ್ಯದ ಹಸಿರೀಕರಣ ಯೋಜನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅವರು ಕರೆ ನೀಡಿದರು.

ಹವಾಮಾನ ಬದಲಾವಣೆಯನ್ನು ಎದುರಿಸುವಲ್ಲಿ ಮತ್ತು  ಹಸಿರನ್ನು ಹೆಚ್ಚಿಸುವಲ್ಲಿ ಗಿಡ ನೆಡುವಿಕೆಯ ಮಹತ್ವದ ಬಗ್ಗೆ ಸ್ಥಳೀಯರಿಗೆ ಶಿಕ್ಷಣ ನೀಡುವುದು ಅಗತ್ಯವಾಗಿದೆ.  ಕಾಶ್ಮೀರದ ಈ ಯೋಜನೆಯು ದೇಶದ ಎಲ್ಲಾ ಕಡೆಗೂ ಅನ್ವಯಿಸಬಹುದಾದ ಯೋಜನೆ. ಹಬ್ಬದ ದಿನದಂದು ಕನಿಷ್ಟ ಗಿಡಗಳನ್ನು ವಿತರಿಸುವುದು ಅಥವಾ ಗಿಡ ನೆಡುವ ಯೋಜನೆಯನ್ನು ಜಾರಿ ಮಾಡಬಹುದಾಗಿದೆ. ಈ ಮೂಲಕ ಹವಾಮಾನದ ವೈಪರೀತ್ಯ, ಹವಮಾನ ಬದಲಾವಣೆಯಂತಹ ಪ್ರಮುಖವಾದ ಸವಾಲುಗಳನ್ನು ಎದುರಿಸಲು ಯೋಜನೆ ರೂಪಿಸಬಹುದಾಗಿದೆ. ಹೀಗಾಗಿ ರಾಜ್ಯದಲ್ಲೂ, ಈ ಬಗ್ಗೆ ಅರಣ್ಯ ಸಚಿವರು, ಇಲಾಖೆ ಯೋಚಿಸಬಹುದಾದ ಕಾರ್ಯಕ್ರಮ ಇದಾಗಿದೆ. ಹಸಿರುವ ಉಳಿಸಲು, ಹಬ್ಬ, ಹುಟ್ಟುಹಬ್ಬ ಸೇರಿದಂತೆ ವಿವಿಧ ದಿನಗಳಲ್ಲಿ ಗಿಡ ನೆಡುವ ಹಾಗೂ ಉಳಿಸುವ ವಿಶೇಷ ಯೋಜನೆಗಳ ಅನಿವಾರ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror