Advertisement
MIRROR FOCUS

ಹಬ್ಬದ ದಿನ 2 ಲಕ್ಷ ಸಸಿ ವಿತರಿಸಿದ ಅರಣ್ಯ ಇಲಾಖೆ

Share

ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಸಿರು ಹೊದಿಕೆಯನ್ನು ಹೆಚ್ಚಿಸುವ ಸಲುವಾಗಿ ಅರಣ್ಯ ಇಲಾಖೆಯು ಹಬ್ಬದ ದಿನದಂದು ಸಸಿಗಳನ್ನು ವಿತರಿಸುವ ಪ್ರಯತ್ನ ಮಾಡಿದೆ. ಈ ಬಾರಿ ಈದ್-ಉಲ್-ಫಿತರ್‌ನಲ್ಲಿ ಸಾರ್ವಜನಿಕರಿಗೆ ವಿವಿಧ ಜಾತಿಯ ಸುಮಾರು 2 ಲಕ್ಷ ಸಸಿಗಳನ್ನು ಉಚಿತವಾಗಿ ವಿತರಿಸಿತು.……..ಮುಂದೆ ಓದಿ…..

Advertisement
Advertisement

ಈದ್ ನಮಾಜ್ ನಂತರ ಈದ್ಗಾಗಳು ಮತ್ತು ಮಸೀದಿಗಳ ಬಳಿ ಸಸಿಗಳನ್ನು ವಿತರಿಸಿತು, ಇದರಲ್ಲಿ ಸಮುದಾಯದ ಎಲ್ಲರೂ ಆಸಕ್ತಿಯಿಂದ ಭಾಗವಹಿಸಿದರು.ಅಲ್ಲಿನ ಅರಣ್ಯ ಸಚಿವ ಜಾವೇದ್ ಅಹ್ಮದ್ ರಾಣಾ ಅವರು ಸಸಿ ವಿತರಣೆಯನ್ನು ಆಯೋಜಿಸುವಲ್ಲಿ ಅರಣ್ಯ ಅಧಿಕಾರಿಗಳ ಪ್ರಯತ್ನಗಳನ್ನು ಶ್ಲಾಘಿಸಿದರು, ಈ ಉಪಕ್ರಮವು ಪರಿಸರ ಸುಸ್ಥಿರತೆ ಮತ್ತು ಅರಣ್ಯೀಕರಣದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ ಎಂದು  ಹೇಳಿದರು. ಜನರು ತಮ್ಮ ಈದ್ ಆಚರಣೆಯ ಭಾಗವಾಗಿ ಗಿಡಗಳನ್ನು ನೆಡುವ ಮೂಲಕ ಹಬ್ಬವನ್ನು ಶಾಶ್ವತವಾಗಿರಿಸಬೇಕಯ ಹಾಗೂ ಆ ನೆನಪಲ್ಲಿ  ಹಸಿರು ಮತ್ತು ಆರೋಗ್ಯಕರ ಪರಿಸರಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದರು.ಭವಿಷ್ಯದ ಹಸಿರೀಕರಣ ಯೋಜನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅವರು ಕರೆ ನೀಡಿದರು.

ಹವಾಮಾನ ಬದಲಾವಣೆಯನ್ನು ಎದುರಿಸುವಲ್ಲಿ ಮತ್ತು  ಹಸಿರನ್ನು ಹೆಚ್ಚಿಸುವಲ್ಲಿ ಗಿಡ ನೆಡುವಿಕೆಯ ಮಹತ್ವದ ಬಗ್ಗೆ ಸ್ಥಳೀಯರಿಗೆ ಶಿಕ್ಷಣ ನೀಡುವುದು ಅಗತ್ಯವಾಗಿದೆ.  ಕಾಶ್ಮೀರದ ಈ ಯೋಜನೆಯು ದೇಶದ ಎಲ್ಲಾ ಕಡೆಗೂ ಅನ್ವಯಿಸಬಹುದಾದ ಯೋಜನೆ. ಹಬ್ಬದ ದಿನದಂದು ಕನಿಷ್ಟ ಗಿಡಗಳನ್ನು ವಿತರಿಸುವುದು ಅಥವಾ ಗಿಡ ನೆಡುವ ಯೋಜನೆಯನ್ನು ಜಾರಿ ಮಾಡಬಹುದಾಗಿದೆ. ಈ ಮೂಲಕ ಹವಾಮಾನದ ವೈಪರೀತ್ಯ, ಹವಮಾನ ಬದಲಾವಣೆಯಂತಹ ಪ್ರಮುಖವಾದ ಸವಾಲುಗಳನ್ನು ಎದುರಿಸಲು ಯೋಜನೆ ರೂಪಿಸಬಹುದಾಗಿದೆ. ಹೀಗಾಗಿ ರಾಜ್ಯದಲ್ಲೂ, ಈ ಬಗ್ಗೆ ಅರಣ್ಯ ಸಚಿವರು, ಇಲಾಖೆ ಯೋಚಿಸಬಹುದಾದ ಕಾರ್ಯಕ್ರಮ ಇದಾಗಿದೆ. ಹಸಿರುವ ಉಳಿಸಲು, ಹಬ್ಬ, ಹುಟ್ಟುಹಬ್ಬ ಸೇರಿದಂತೆ ವಿವಿಧ ದಿನಗಳಲ್ಲಿ ಗಿಡ ನೆಡುವ ಹಾಗೂ ಉಳಿಸುವ ವಿಶೇಷ ಯೋಜನೆಗಳ ಅನಿವಾರ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

3 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

11 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

17 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

18 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

18 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

18 hours ago