Advertisement
MIRROR FOCUS

ಹಬ್ಬದ ದಿನ 2 ಲಕ್ಷ ಸಸಿ ವಿತರಿಸಿದ ಅರಣ್ಯ ಇಲಾಖೆ

Share

ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಸಿರು ಹೊದಿಕೆಯನ್ನು ಹೆಚ್ಚಿಸುವ ಸಲುವಾಗಿ ಅರಣ್ಯ ಇಲಾಖೆಯು ಹಬ್ಬದ ದಿನದಂದು ಸಸಿಗಳನ್ನು ವಿತರಿಸುವ ಪ್ರಯತ್ನ ಮಾಡಿದೆ. ಈ ಬಾರಿ ಈದ್-ಉಲ್-ಫಿತರ್‌ನಲ್ಲಿ ಸಾರ್ವಜನಿಕರಿಗೆ ವಿವಿಧ ಜಾತಿಯ ಸುಮಾರು 2 ಲಕ್ಷ ಸಸಿಗಳನ್ನು ಉಚಿತವಾಗಿ ವಿತರಿಸಿತು.……..ಮುಂದೆ ಓದಿ…..

ಈದ್ ನಮಾಜ್ ನಂತರ ಈದ್ಗಾಗಳು ಮತ್ತು ಮಸೀದಿಗಳ ಬಳಿ ಸಸಿಗಳನ್ನು ವಿತರಿಸಿತು, ಇದರಲ್ಲಿ ಸಮುದಾಯದ ಎಲ್ಲರೂ ಆಸಕ್ತಿಯಿಂದ ಭಾಗವಹಿಸಿದರು.ಅಲ್ಲಿನ ಅರಣ್ಯ ಸಚಿವ ಜಾವೇದ್ ಅಹ್ಮದ್ ರಾಣಾ ಅವರು ಸಸಿ ವಿತರಣೆಯನ್ನು ಆಯೋಜಿಸುವಲ್ಲಿ ಅರಣ್ಯ ಅಧಿಕಾರಿಗಳ ಪ್ರಯತ್ನಗಳನ್ನು ಶ್ಲಾಘಿಸಿದರು, ಈ ಉಪಕ್ರಮವು ಪರಿಸರ ಸುಸ್ಥಿರತೆ ಮತ್ತು ಅರಣ್ಯೀಕರಣದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ ಎಂದು  ಹೇಳಿದರು. ಜನರು ತಮ್ಮ ಈದ್ ಆಚರಣೆಯ ಭಾಗವಾಗಿ ಗಿಡಗಳನ್ನು ನೆಡುವ ಮೂಲಕ ಹಬ್ಬವನ್ನು ಶಾಶ್ವತವಾಗಿರಿಸಬೇಕಯ ಹಾಗೂ ಆ ನೆನಪಲ್ಲಿ  ಹಸಿರು ಮತ್ತು ಆರೋಗ್ಯಕರ ಪರಿಸರಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದರು.ಭವಿಷ್ಯದ ಹಸಿರೀಕರಣ ಯೋಜನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅವರು ಕರೆ ನೀಡಿದರು.

ಹವಾಮಾನ ಬದಲಾವಣೆಯನ್ನು ಎದುರಿಸುವಲ್ಲಿ ಮತ್ತು  ಹಸಿರನ್ನು ಹೆಚ್ಚಿಸುವಲ್ಲಿ ಗಿಡ ನೆಡುವಿಕೆಯ ಮಹತ್ವದ ಬಗ್ಗೆ ಸ್ಥಳೀಯರಿಗೆ ಶಿಕ್ಷಣ ನೀಡುವುದು ಅಗತ್ಯವಾಗಿದೆ.  ಕಾಶ್ಮೀರದ ಈ ಯೋಜನೆಯು ದೇಶದ ಎಲ್ಲಾ ಕಡೆಗೂ ಅನ್ವಯಿಸಬಹುದಾದ ಯೋಜನೆ. ಹಬ್ಬದ ದಿನದಂದು ಕನಿಷ್ಟ ಗಿಡಗಳನ್ನು ವಿತರಿಸುವುದು ಅಥವಾ ಗಿಡ ನೆಡುವ ಯೋಜನೆಯನ್ನು ಜಾರಿ ಮಾಡಬಹುದಾಗಿದೆ. ಈ ಮೂಲಕ ಹವಾಮಾನದ ವೈಪರೀತ್ಯ, ಹವಮಾನ ಬದಲಾವಣೆಯಂತಹ ಪ್ರಮುಖವಾದ ಸವಾಲುಗಳನ್ನು ಎದುರಿಸಲು ಯೋಜನೆ ರೂಪಿಸಬಹುದಾಗಿದೆ. ಹೀಗಾಗಿ ರಾಜ್ಯದಲ್ಲೂ, ಈ ಬಗ್ಗೆ ಅರಣ್ಯ ಸಚಿವರು, ಇಲಾಖೆ ಯೋಚಿಸಬಹುದಾದ ಕಾರ್ಯಕ್ರಮ ಇದಾಗಿದೆ. ಹಸಿರುವ ಉಳಿಸಲು, ಹಬ್ಬ, ಹುಟ್ಟುಹಬ್ಬ ಸೇರಿದಂತೆ ವಿವಿಧ ದಿನಗಳಲ್ಲಿ ಗಿಡ ನೆಡುವ ಹಾಗೂ ಉಳಿಸುವ ವಿಶೇಷ ಯೋಜನೆಗಳ ಅನಿವಾರ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

4 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

5 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

6 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago