ಕೊಚ್ಚಿ – ದುಗ್ಗಳ-ಮಾವಿನಕಟ್ಟೆ ರಸ್ತೆ ಅಭಿವೃದ್ಧಿ | ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅನುಮತಿ | ಜನರ ಪ್ರಯತ್ನಕ್ಕೆ ಯಶಸ್ಸು |

October 14, 2025
10:47 PM

ಸುಳ್ಯ ಹಾಗೂ ಪುತ್ತೂರು ಸಂಪರ್ಕ ಮಾಡುವ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗಾಗಿ ಜನರು ಮಾಡಿರುವ ಪ್ರಯತ್ನ ಈಗ ಫಲ ನೀಡಿದೆ. ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಸಂಪರ್ಕಿಸುವ ಪೆರ್ಲಕಣೆ – ನಿಡುವೆ – ಕೊಚ್ಚಿ -ದುಗ್ಗಳ – ಕಲ್ಲರ್ಪೆ- ಮಾವಿನಕಟ್ಟೆ ರಸ್ತೆ ಅಭಿವೃದ್ಧಿಗೆಒತ್ತಾಯಿಸಿ ಪ್ರಧಾನಿ ಕಚೇರಿವರೆಗೂ ಮನವಿ ಮಾಡಲಾಗಿತ್ತು. ಇದೀಗ ಅರಣ್ಯ ಇಲಾಖೆಯು ಸ್ಥಳ ಪರಿಶೀಲಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಬಹುದಾಗಿದೆ ಎಂದು ವರದಿ ನೀಡಿದೆ.

Advertisement

ಈ ರಸ್ತೆ ಅಭಿವೃದ್ಧಿಗಾಗಿ ಪೆರ್ಲಂಪಾಡಿ ಗ್ರಾಮಸ್ಥ ನಿತಿನ್ ಕೆ.ಬಿ. ಕೊಚ್ಚಿ ದೆಹಲಿಯ  ಅರಣ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ  ಬರೆದಿದ್ದರು.   ಪತ್ರದಲ್ಲಿ ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಸಂಪರ್ಕಿಸುವ  ಕೊಚ್ಚಿ – ದುಗ್ಗಳ ಕಲ್ಲರ್ಪೆ ಮಾವಿನಕಟ್ಟೆ ಅಂತರ್ ತಾಲೂಕು ರಸ್ತೆಯನ್ನು ಅಭಿವೃದ್ಧಿಗೊಳಿಸಲು ಅರಣ್ಯ ಇಲಾಖೆಯಿಂದ ಆಗಿರುವ ಸಮಸ್ಯೆಯ ಬಗ್ಗೆ ತಿಳಿಸಿದ್ದರು. ಹೀಗಾಗಿ  ಅರಣ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಅವರು ರಸ್ತೆ  ಕಾಂಕ್ರೀಟೀಕರಣಗೊಳಿಸುವ ಬಗ್ಗೆ ಸ್ಥಳ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಪುತ್ತೂರು ವಲಯ ಅರಣ್ಯಾಧಿಕಾರಿ ಅವರಿಗೆ ಸೂಚಿಸಿದ್ದರು.

ಹೀಗಾಗಿ ಸ್ಥಳ ಪರಿಶೀಲಿಸಿದ ಅರಣ್ಯ ಇಲಾಖಾ ಅಧಿಕಾರಿಗಳು, ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಸಂಪರ್ಕಿಸುವ ಕೊಚ್ಚಿ -ದುಗ್ಗಳ – ಕಲ್ಲರ್ಪೆ- ಮಾವಿನಕಟ್ಟೆ ರಸ್ತೆಯು ಪೆರಿಯಬಾಣೆ ಮೀಸಲು ಅರಣ್ಯದಲ್ಲಿ ಹಾದುಹೋಗುವ ದುಗ್ಗಳ ಎಂಬಲ್ಲಿ ಮಣ್ಣಿನ ಕಚ್ಚಾ ರಸ್ತೆಯಿದ್ದು, ಪರಿಯವಾಣೆ ಮೀಸಲು ಅರಣ್ಯದೊಳಗೆ ಹಾದು ಹೋಗುತ್ತಿದ್ದು , ಅನೇಕರು ಈ ರಸ್ತೆ ಬಳಸುವುದರಿಂದ ರಸ್ತೆಯನ್ನು ಅಭಿವೃದ್ಧಿ ಗೊಳಿಸುವುದು  ಮುಖ್ಯವಾಗಿದೆ.  ಹೀಗಾಗಿ ಅರಣ್ಯ ಕಾಯ್ದೆ ಪ್ರಕಾರ ಪ್ರಸ್ತಾವನೆಯನ್ನು ಸಲ್ಲಿಸಿ ಅನುಮತಿ ಪಡೆದ ನಂತರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಬಹುದಾಗಿದೆ ಎಂದು ವರದಿ ನೀಡಿದ್ದಾರೆ. ಈ ಮೂಲಕ ಗ್ರಾಮೀಣ ಭಾಗದ ರಸ್ತೆ ಸಮಸ್ಯೆಯೊಂದಕ್ಕೆ ಮುಕ್ತಿ ದೊರೆತಿದೆ. ಗ್ರಾಮಸ್ಥರ ಪ್ರಯತ್ನ ಫಲ ನೀಡಿದೆ. ( ಕಳೆದ ಬಾರಿ ಪ್ರಕಟಗೊಂಡಿರುವ ವರದಿಯ ಲಿಂಕ್‌ ಇಲ್ಲಿದೆ…)

ಅಭಿವೃದ್ಧಿಯಾಗದ ಎರಡು ತಾಲೂಕು ಸಂಪರ್ಕದ ಗ್ರಾಮೀಣ ರಸ್ತೆ | ಪ್ರಧಾನಿ ಕಚೇರಿವರೆಗೂ ತಲಪಿತ್ತು ಬೇಡಿಕೆ | ನೂತನ ಸಂಸದರಿಗೂ ಮನವಿ |

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್
February 19, 2026
8:46 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ
February 19, 2026
12:29 PM
by: ಸಾಯಿಶೇಖರ್ ಕರಿಕಳ
ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror