Advertisement
The Rural Mirror ಫಾಲೋಅಪ್

ಕೊಚ್ಚಿ – ದುಗ್ಗಳ-ಮಾವಿನಕಟ್ಟೆ ರಸ್ತೆ ಅಭಿವೃದ್ಧಿ | ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅನುಮತಿ | ಜನರ ಪ್ರಯತ್ನಕ್ಕೆ ಯಶಸ್ಸು |

Share

ಸುಳ್ಯ ಹಾಗೂ ಪುತ್ತೂರು ಸಂಪರ್ಕ ಮಾಡುವ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗಾಗಿ ಜನರು ಮಾಡಿರುವ ಪ್ರಯತ್ನ ಈಗ ಫಲ ನೀಡಿದೆ. ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಸಂಪರ್ಕಿಸುವ ಪೆರ್ಲಕಣೆ – ನಿಡುವೆ – ಕೊಚ್ಚಿ -ದುಗ್ಗಳ – ಕಲ್ಲರ್ಪೆ- ಮಾವಿನಕಟ್ಟೆ ರಸ್ತೆ ಅಭಿವೃದ್ಧಿಗೆಒತ್ತಾಯಿಸಿ ಪ್ರಧಾನಿ ಕಚೇರಿವರೆಗೂ ಮನವಿ ಮಾಡಲಾಗಿತ್ತು. ಇದೀಗ ಅರಣ್ಯ ಇಲಾಖೆಯು ಸ್ಥಳ ಪರಿಶೀಲಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಬಹುದಾಗಿದೆ ಎಂದು ವರದಿ ನೀಡಿದೆ.

ಈ ರಸ್ತೆ ಅಭಿವೃದ್ಧಿಗಾಗಿ ಪೆರ್ಲಂಪಾಡಿ ಗ್ರಾಮಸ್ಥ ನಿತಿನ್ ಕೆ.ಬಿ. ಕೊಚ್ಚಿ ದೆಹಲಿಯ  ಅರಣ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ  ಬರೆದಿದ್ದರು.   ಪತ್ರದಲ್ಲಿ ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಸಂಪರ್ಕಿಸುವ  ಕೊಚ್ಚಿ – ದುಗ್ಗಳ ಕಲ್ಲರ್ಪೆ ಮಾವಿನಕಟ್ಟೆ ಅಂತರ್ ತಾಲೂಕು ರಸ್ತೆಯನ್ನು ಅಭಿವೃದ್ಧಿಗೊಳಿಸಲು ಅರಣ್ಯ ಇಲಾಖೆಯಿಂದ ಆಗಿರುವ ಸಮಸ್ಯೆಯ ಬಗ್ಗೆ ತಿಳಿಸಿದ್ದರು. ಹೀಗಾಗಿ  ಅರಣ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಅವರು ರಸ್ತೆ  ಕಾಂಕ್ರೀಟೀಕರಣಗೊಳಿಸುವ ಬಗ್ಗೆ ಸ್ಥಳ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಪುತ್ತೂರು ವಲಯ ಅರಣ್ಯಾಧಿಕಾರಿ ಅವರಿಗೆ ಸೂಚಿಸಿದ್ದರು.

ಹೀಗಾಗಿ ಸ್ಥಳ ಪರಿಶೀಲಿಸಿದ ಅರಣ್ಯ ಇಲಾಖಾ ಅಧಿಕಾರಿಗಳು, ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಸಂಪರ್ಕಿಸುವ ಕೊಚ್ಚಿ -ದುಗ್ಗಳ – ಕಲ್ಲರ್ಪೆ- ಮಾವಿನಕಟ್ಟೆ ರಸ್ತೆಯು ಪೆರಿಯಬಾಣೆ ಮೀಸಲು ಅರಣ್ಯದಲ್ಲಿ ಹಾದುಹೋಗುವ ದುಗ್ಗಳ ಎಂಬಲ್ಲಿ ಮಣ್ಣಿನ ಕಚ್ಚಾ ರಸ್ತೆಯಿದ್ದು, ಪರಿಯವಾಣೆ ಮೀಸಲು ಅರಣ್ಯದೊಳಗೆ ಹಾದು ಹೋಗುತ್ತಿದ್ದು , ಅನೇಕರು ಈ ರಸ್ತೆ ಬಳಸುವುದರಿಂದ ರಸ್ತೆಯನ್ನು ಅಭಿವೃದ್ಧಿ ಗೊಳಿಸುವುದು  ಮುಖ್ಯವಾಗಿದೆ.  ಹೀಗಾಗಿ ಅರಣ್ಯ ಕಾಯ್ದೆ ಪ್ರಕಾರ ಪ್ರಸ್ತಾವನೆಯನ್ನು ಸಲ್ಲಿಸಿ ಅನುಮತಿ ಪಡೆದ ನಂತರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಬಹುದಾಗಿದೆ ಎಂದು ವರದಿ ನೀಡಿದ್ದಾರೆ. ಈ ಮೂಲಕ ಗ್ರಾಮೀಣ ಭಾಗದ ರಸ್ತೆ ಸಮಸ್ಯೆಯೊಂದಕ್ಕೆ ಮುಕ್ತಿ ದೊರೆತಿದೆ. ಗ್ರಾಮಸ್ಥರ ಪ್ರಯತ್ನ ಫಲ ನೀಡಿದೆ. ( ಕಳೆದ ಬಾರಿ ಪ್ರಕಟಗೊಂಡಿರುವ ವರದಿಯ ಲಿಂಕ್‌ ಇಲ್ಲಿದೆ…)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

52 minutes ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

8 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

14 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

23 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

24 hours ago