Advertisement
The Rural Mirror ಫಾಲೋಅಪ್

ಕೊಚ್ಚಿ – ದುಗ್ಗಳ-ಮಾವಿನಕಟ್ಟೆ ರಸ್ತೆ ಅಭಿವೃದ್ಧಿ | ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅನುಮತಿ | ಜನರ ಪ್ರಯತ್ನಕ್ಕೆ ಯಶಸ್ಸು |

Share

ಸುಳ್ಯ ಹಾಗೂ ಪುತ್ತೂರು ಸಂಪರ್ಕ ಮಾಡುವ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗಾಗಿ ಜನರು ಮಾಡಿರುವ ಪ್ರಯತ್ನ ಈಗ ಫಲ ನೀಡಿದೆ. ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಸಂಪರ್ಕಿಸುವ ಪೆರ್ಲಕಣೆ – ನಿಡುವೆ – ಕೊಚ್ಚಿ -ದುಗ್ಗಳ – ಕಲ್ಲರ್ಪೆ- ಮಾವಿನಕಟ್ಟೆ ರಸ್ತೆ ಅಭಿವೃದ್ಧಿಗೆಒತ್ತಾಯಿಸಿ ಪ್ರಧಾನಿ ಕಚೇರಿವರೆಗೂ ಮನವಿ ಮಾಡಲಾಗಿತ್ತು. ಇದೀಗ ಅರಣ್ಯ ಇಲಾಖೆಯು ಸ್ಥಳ ಪರಿಶೀಲಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಬಹುದಾಗಿದೆ ಎಂದು ವರದಿ ನೀಡಿದೆ.

ಈ ರಸ್ತೆ ಅಭಿವೃದ್ಧಿಗಾಗಿ ಪೆರ್ಲಂಪಾಡಿ ಗ್ರಾಮಸ್ಥ ನಿತಿನ್ ಕೆ.ಬಿ. ಕೊಚ್ಚಿ ದೆಹಲಿಯ  ಅರಣ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ  ಬರೆದಿದ್ದರು.   ಪತ್ರದಲ್ಲಿ ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಸಂಪರ್ಕಿಸುವ  ಕೊಚ್ಚಿ – ದುಗ್ಗಳ ಕಲ್ಲರ್ಪೆ ಮಾವಿನಕಟ್ಟೆ ಅಂತರ್ ತಾಲೂಕು ರಸ್ತೆಯನ್ನು ಅಭಿವೃದ್ಧಿಗೊಳಿಸಲು ಅರಣ್ಯ ಇಲಾಖೆಯಿಂದ ಆಗಿರುವ ಸಮಸ್ಯೆಯ ಬಗ್ಗೆ ತಿಳಿಸಿದ್ದರು. ಹೀಗಾಗಿ  ಅರಣ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಅವರು ರಸ್ತೆ  ಕಾಂಕ್ರೀಟೀಕರಣಗೊಳಿಸುವ ಬಗ್ಗೆ ಸ್ಥಳ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಪುತ್ತೂರು ವಲಯ ಅರಣ್ಯಾಧಿಕಾರಿ ಅವರಿಗೆ ಸೂಚಿಸಿದ್ದರು.

ಹೀಗಾಗಿ ಸ್ಥಳ ಪರಿಶೀಲಿಸಿದ ಅರಣ್ಯ ಇಲಾಖಾ ಅಧಿಕಾರಿಗಳು, ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಸಂಪರ್ಕಿಸುವ ಕೊಚ್ಚಿ -ದುಗ್ಗಳ – ಕಲ್ಲರ್ಪೆ- ಮಾವಿನಕಟ್ಟೆ ರಸ್ತೆಯು ಪೆರಿಯಬಾಣೆ ಮೀಸಲು ಅರಣ್ಯದಲ್ಲಿ ಹಾದುಹೋಗುವ ದುಗ್ಗಳ ಎಂಬಲ್ಲಿ ಮಣ್ಣಿನ ಕಚ್ಚಾ ರಸ್ತೆಯಿದ್ದು, ಪರಿಯವಾಣೆ ಮೀಸಲು ಅರಣ್ಯದೊಳಗೆ ಹಾದು ಹೋಗುತ್ತಿದ್ದು , ಅನೇಕರು ಈ ರಸ್ತೆ ಬಳಸುವುದರಿಂದ ರಸ್ತೆಯನ್ನು ಅಭಿವೃದ್ಧಿ ಗೊಳಿಸುವುದು  ಮುಖ್ಯವಾಗಿದೆ.  ಹೀಗಾಗಿ ಅರಣ್ಯ ಕಾಯ್ದೆ ಪ್ರಕಾರ ಪ್ರಸ್ತಾವನೆಯನ್ನು ಸಲ್ಲಿಸಿ ಅನುಮತಿ ಪಡೆದ ನಂತರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಬಹುದಾಗಿದೆ ಎಂದು ವರದಿ ನೀಡಿದ್ದಾರೆ. ಈ ಮೂಲಕ ಗ್ರಾಮೀಣ ಭಾಗದ ರಸ್ತೆ ಸಮಸ್ಯೆಯೊಂದಕ್ಕೆ ಮುಕ್ತಿ ದೊರೆತಿದೆ. ಗ್ರಾಮಸ್ಥರ ಪ್ರಯತ್ನ ಫಲ ನೀಡಿದೆ. ( ಕಳೆದ ಬಾರಿ ಪ್ರಕಟಗೊಂಡಿರುವ ವರದಿಯ ಲಿಂಕ್‌ ಇಲ್ಲಿದೆ…)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

4 days ago