Advertisement
The Rural Mirror ಫಾಲೋಅಪ್

ಕೊಚ್ಚಿ – ದುಗ್ಗಳ-ಮಾವಿನಕಟ್ಟೆ ರಸ್ತೆ ಅಭಿವೃದ್ಧಿ | ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅನುಮತಿ | ಜನರ ಪ್ರಯತ್ನಕ್ಕೆ ಯಶಸ್ಸು |

Share

ಸುಳ್ಯ ಹಾಗೂ ಪುತ್ತೂರು ಸಂಪರ್ಕ ಮಾಡುವ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗಾಗಿ ಜನರು ಮಾಡಿರುವ ಪ್ರಯತ್ನ ಈಗ ಫಲ ನೀಡಿದೆ. ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಸಂಪರ್ಕಿಸುವ ಪೆರ್ಲಕಣೆ – ನಿಡುವೆ – ಕೊಚ್ಚಿ -ದುಗ್ಗಳ – ಕಲ್ಲರ್ಪೆ- ಮಾವಿನಕಟ್ಟೆ ರಸ್ತೆ ಅಭಿವೃದ್ಧಿಗೆಒತ್ತಾಯಿಸಿ ಪ್ರಧಾನಿ ಕಚೇರಿವರೆಗೂ ಮನವಿ ಮಾಡಲಾಗಿತ್ತು. ಇದೀಗ ಅರಣ್ಯ ಇಲಾಖೆಯು ಸ್ಥಳ ಪರಿಶೀಲಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಬಹುದಾಗಿದೆ ಎಂದು ವರದಿ ನೀಡಿದೆ.

ಈ ರಸ್ತೆ ಅಭಿವೃದ್ಧಿಗಾಗಿ ಪೆರ್ಲಂಪಾಡಿ ಗ್ರಾಮಸ್ಥ ನಿತಿನ್ ಕೆ.ಬಿ. ಕೊಚ್ಚಿ ದೆಹಲಿಯ  ಅರಣ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ  ಬರೆದಿದ್ದರು.   ಪತ್ರದಲ್ಲಿ ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಸಂಪರ್ಕಿಸುವ  ಕೊಚ್ಚಿ – ದುಗ್ಗಳ ಕಲ್ಲರ್ಪೆ ಮಾವಿನಕಟ್ಟೆ ಅಂತರ್ ತಾಲೂಕು ರಸ್ತೆಯನ್ನು ಅಭಿವೃದ್ಧಿಗೊಳಿಸಲು ಅರಣ್ಯ ಇಲಾಖೆಯಿಂದ ಆಗಿರುವ ಸಮಸ್ಯೆಯ ಬಗ್ಗೆ ತಿಳಿಸಿದ್ದರು. ಹೀಗಾಗಿ  ಅರಣ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಅವರು ರಸ್ತೆ  ಕಾಂಕ್ರೀಟೀಕರಣಗೊಳಿಸುವ ಬಗ್ಗೆ ಸ್ಥಳ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಪುತ್ತೂರು ವಲಯ ಅರಣ್ಯಾಧಿಕಾರಿ ಅವರಿಗೆ ಸೂಚಿಸಿದ್ದರು.

ಹೀಗಾಗಿ ಸ್ಥಳ ಪರಿಶೀಲಿಸಿದ ಅರಣ್ಯ ಇಲಾಖಾ ಅಧಿಕಾರಿಗಳು, ಸುಳ್ಯ ಹಾಗೂ ಪುತ್ತೂರು ತಾಲೂಕುಗಳನ್ನು ಸಂಪರ್ಕಿಸುವ ಕೊಚ್ಚಿ -ದುಗ್ಗಳ – ಕಲ್ಲರ್ಪೆ- ಮಾವಿನಕಟ್ಟೆ ರಸ್ತೆಯು ಪೆರಿಯಬಾಣೆ ಮೀಸಲು ಅರಣ್ಯದಲ್ಲಿ ಹಾದುಹೋಗುವ ದುಗ್ಗಳ ಎಂಬಲ್ಲಿ ಮಣ್ಣಿನ ಕಚ್ಚಾ ರಸ್ತೆಯಿದ್ದು, ಪರಿಯವಾಣೆ ಮೀಸಲು ಅರಣ್ಯದೊಳಗೆ ಹಾದು ಹೋಗುತ್ತಿದ್ದು , ಅನೇಕರು ಈ ರಸ್ತೆ ಬಳಸುವುದರಿಂದ ರಸ್ತೆಯನ್ನು ಅಭಿವೃದ್ಧಿ ಗೊಳಿಸುವುದು  ಮುಖ್ಯವಾಗಿದೆ.  ಹೀಗಾಗಿ ಅರಣ್ಯ ಕಾಯ್ದೆ ಪ್ರಕಾರ ಪ್ರಸ್ತಾವನೆಯನ್ನು ಸಲ್ಲಿಸಿ ಅನುಮತಿ ಪಡೆದ ನಂತರ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಬಹುದಾಗಿದೆ ಎಂದು ವರದಿ ನೀಡಿದ್ದಾರೆ. ಈ ಮೂಲಕ ಗ್ರಾಮೀಣ ಭಾಗದ ರಸ್ತೆ ಸಮಸ್ಯೆಯೊಂದಕ್ಕೆ ಮುಕ್ತಿ ದೊರೆತಿದೆ. ಗ್ರಾಮಸ್ಥರ ಪ್ರಯತ್ನ ಫಲ ನೀಡಿದೆ. ( ಕಳೆದ ಬಾರಿ ಪ್ರಕಟಗೊಂಡಿರುವ ವರದಿಯ ಲಿಂಕ್‌ ಇಲ್ಲಿದೆ…)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

6 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

15 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

19 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago