50 ವರ್ಷಗಳಿಂದ ವಾಸವಿದ್ದ ಕುಟುಂಬವನ್ನು ಒಕ್ಕಲೆಬ್ಬಿಸಿದ ಅರಣ್ಯ ಇಲಾಖೆ – ಕಾರಣ ಏನು..?

November 4, 2025
10:56 AM

ಕುದುರೆಮುಖಿರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಅರಸಿನಮಕ್ಕಿಯಲ್ಲಿ ಕಳೆದ ಐದು ದಶಕದಿಂದಲೂ ಪಿ.ಟಿ.ಜೋಸೆಫ್ ಎಂಬವರನ್ನು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಒಕ್ಕಲೆಬ್ಬಿಸಿದ್ದು, ಮಾತ್ರವಲ್ಲದೆ ಅವರ ಮನೆಯನ್ನು ದ್ವಂಸಗೊಳಿಸಿರುವ ಘಟನೆಯು ನಡೆದಿದೆ.

ಜೋಸೆಫ್ ಅವರ ಕುಟುಂಬ ಕಳೆದ 50 ವರ್ಷಗಳಿಂದ ವಾಸವಿದ್ದ ಮನೆಯನ್ನು ನಾಶಪಡಿಸಲಾಗಿದ್ದು, ಮಾತ್ರವಲ್ಲದೆ ಸುಮಾರು ಎರಡು ಎಕರೆ ಜಾಗದಲ್ಲಿದ್ದ ಫಲಭರಿತ ಅಡಿಕೆಮರ, ತೆಂಗಿನಮರಗಳನ್ನು ಹಾಗೂ ಇತರ ಕೃಷಿಯನ್ನು ಪೂರ್ಣ ಕಡಿದುರುಳಿಸಲಾಗಿದ, ಹಾಗೂ ಅರಣ್ಯ ಗಿಡಗಳನ್ನು ನೆಡಲಾಗಿದೆ.  ಆರಂಭದಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಹೊರ ಬರುವ ಕುಟುಂಬಗಳಿಗೆ ಪರಿಹಾರ ನೀಡಲಾಗುತ್ತಿತ್ತು. ಜಮೀನಿನ ದಾಖಲೆಗಳು ಇರದಿದ್ದರೂ ಕೃಷಿಗೆ ಹಾಗೂ ಮನೆಗೆ ಪರಿಹಾರ ನೀಡಿ ಹೊರಬರುವ ಕುಟುಂಬಕ್ಕೆ ಸಹಾಯಧನವನ್ನೂ ನೀಡಲಾಗುತ್ತಿತ್ತು. ಕೆಲವು ವರ್ಷಗಳಿಂದ ಪುನರ್ವಸತಿ ಪ್ಯಾಕೇಜ್ ಸ್ಥಗಿತಗೊಂಡಿದೆ. ಇದೀಗ ಯಾವ ಪರಿಹಾರಧನವೂ ನೀಡದೆ ಒಕ್ಕಲೆಬ್ಬಿಸುವ ಕಾರ್ಯ ಆರಂಭಿಸಿದ್ದಾರೆ ಎಂದು ಕೃಷಿಕರು ಆರೋಪಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror