ಅರಣ್ಯ ಒತ್ತುವರಿ ಪ್ರಕರಣಗಳಲ್ಲಿ ವಸ್ತುಸ್ಥಿತಿಯನ್ನು ಪರಿಶೀಲಿಸಿ ಮಾನವೀಯ ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದಾಂಡೇಲಿಯಲ್ಲಿ ಮಾತನಾಡಿದ ಅವರು, ಮೂರು ಎಕರೆಗಿಂತ ಕಡಿಮೆ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡುತ್ತಿರುವ ಕೃಷಿಕರು, ಬುಡಕಟ್ಟು ಸಮುದಾಯದವರನ್ನು ಒಕ್ಕಲೆಬ್ಬಿಸಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟಸೂಚನೆ ನೀಡಲಾಗಿದೆ ಎಂದರು. ಹೋಂಸ್ಟೇ, ರೆಸಾರ್ಟ್ಗಳಿಗಾಗಿ ಹತ್ತಾರು ಎಕರೆ ಅರಣ್ಯ ಪ್ರದೇಶ ಒತ್ತುವರಿ ಮಾಡಿಕೊಂಡಿರುವವರಿಂದ ಕೂಡಲೇ ಯಾವುದೇ ಮುಲಾಜಿಲ್ಲದೇ, ಒತ್ತುವರಿ ತೆರವು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…