ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಪರ್ವತಶ್ರೇಣಿಯ ಚಂದ್ರದ್ರೋಣ ಪರ್ವತದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು 25 ಎಕೆರೆಗೂ ಹೆಚ್ಚು ಅರಣ್ಯ ಪ್ರದೇಶ ನಾಶವಾಗಿದೆ. ಸೀತಾಳಯ್ಯನಗಿರಿ ಸಮೀಪದ ಬೆಟ್ಟಕ್ಕೆ ಸೋಮವಾರ ಸಂಜೆ ಬೆಂಕಿ ಹೊತ್ತಿಕೊಂಡಿದ್ದು ಸಾಕಷ್ಟು ಜೌಷಧೀಯ ಗುಣಗಳಿರುವ ಸಸ್ಯಗಳು, ಇತರೆ ಮರಗಿಡಗಳು ಸುಟ್ಟುಹೋಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿಗಳು ತೆರಳಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು ಬೆಂಕಿ ಹತೋಟಿಗೆ ಬಂದಿದೆಯಾದರು ಪೂರ್ಣ ಪ್ರಮಾಣದಲ್ಲಿ ನಂದಿಸಲು ಸಾಧ್ಯವಾಗಿಲ್ಲ. ಪ್ರವಾಸಿಗರು ಸೇರಿದಂತೆ ಜನರು ಅರಣ್ಯ ಪ್ರದೇಶಕ್ಕೆ ತೆರಳಿ ಧೂಮಪಾನ ಮಾಡುವುದು, ಬೆಂಕಿ ಹಾಕಿ ಅಡುಗೆ ಮಾಡುವುದು ಇಂತಹ ಕೆಲಸ ಮಾಡಬಾರದು ಎಂದು ಚಿಕ್ಕಮಗಳೂರು ವಲಯ ಅರಣ್ಯ ಉಪ ಸಂರಕ್ಷಣಾ ಅಧಿಕಾರಿ ರಮೇಶ್ ಬಾಬು ಮನವಿ ಮಾಡಿದ್ದಾರೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…