ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಪರ್ವತಶ್ರೇಣಿಯ ಚಂದ್ರದ್ರೋಣ ಪರ್ವತದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು 25 ಎಕೆರೆಗೂ ಹೆಚ್ಚು ಅರಣ್ಯ ಪ್ರದೇಶ ನಾಶವಾಗಿದೆ. ಸೀತಾಳಯ್ಯನಗಿರಿ ಸಮೀಪದ ಬೆಟ್ಟಕ್ಕೆ ಸೋಮವಾರ ಸಂಜೆ ಬೆಂಕಿ ಹೊತ್ತಿಕೊಂಡಿದ್ದು ಸಾಕಷ್ಟು ಜೌಷಧೀಯ ಗುಣಗಳಿರುವ ಸಸ್ಯಗಳು, ಇತರೆ ಮರಗಿಡಗಳು ಸುಟ್ಟುಹೋಗಿವೆ. ಸ್ಥಳಕ್ಕೆ ಅಗ್ನಿ ಶಾಮಕ ದಳ, ಅರಣ್ಯ ಇಲಾಖೆ ಸಿಬ್ಬಂದಿಗಳು ತೆರಳಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು ಬೆಂಕಿ ಹತೋಟಿಗೆ ಬಂದಿದೆಯಾದರು ಪೂರ್ಣ ಪ್ರಮಾಣದಲ್ಲಿ ನಂದಿಸಲು ಸಾಧ್ಯವಾಗಿಲ್ಲ. ಪ್ರವಾಸಿಗರು ಸೇರಿದಂತೆ ಜನರು ಅರಣ್ಯ ಪ್ರದೇಶಕ್ಕೆ ತೆರಳಿ ಧೂಮಪಾನ ಮಾಡುವುದು, ಬೆಂಕಿ ಹಾಕಿ ಅಡುಗೆ ಮಾಡುವುದು ಇಂತಹ ಕೆಲಸ ಮಾಡಬಾರದು ಎಂದು ಚಿಕ್ಕಮಗಳೂರು ವಲಯ ಅರಣ್ಯ ಉಪ ಸಂರಕ್ಷಣಾ ಅಧಿಕಾರಿ ರಮೇಶ್ ಬಾಬು ಮನವಿ ಮಾಡಿದ್ದಾರೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…