ಬಿಸಿಲಿನ ತಾಪಕ್ಕೆ ಗುಡ್ಡ, ಬೆಟ್ಟ, ಕಾಡು, ಬಯಲು ಎಲ್ಲವು ಒಣಗಿ ನಿಂತಿದೆ. ಕೊಂಚ ಎಚ್ಚರ ತಪ್ಪಿದರೂ ಬೆಂಕಿ ತಗುಲಿದರೆ ಇಡೀ ಪ್ರದೇಶವೇ ಸುಟ್ಟು ಭಸ್ಮವಾಗುತ್ತದೆ. ಈಗಾಗಲೇ ಹಲವು ಕಡೆ ಬೆಂಕಿ ಅವಘಡ ನಡೆದಿದೆ. ಇದೀಗ ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶವೂ ಭಾನುವಾರ ಹೊತ್ತಿ ಉರಿಯಲಾರಂಭಿಸಿದೆ. ಸಂಜೆಯ ವೇಳೆಗೆ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಆಲೇಖಾನ್ ಹೊರಟ್ಟಿ ಗುಡ್ಡಕ್ಕೆ ಯಾರೊ ಅನಾಮಿಕರು ಹಾಕಿದ ಬೆಂಕಿಯಿಂದ ಅರಣ್ಯ ಉರಿಯುತ್ತಿದೆ ಎಂದು ಹೇಳಲಾಗಿದೆ.
ಈ ಗುಡ್ಡ ಮುಂದಕ್ಕೆ ಚಾರ್ಮಾಡಿ ಘಾಟಿಯನ್ನು ಹೊಂದಿಕೊಂಡಿದೆ. ಎತ್ತರ ಪ್ರದೇಶದ ಗುಡ್ಡದಲ್ಲಿ ವಿಪರೀತ ಬೆಂಕಿ ಹೊತ್ತಿ ಉರಿಯುತ್ತಿದೆ. ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗುತ್ತಿದೆ. ಗುಡ್ಡದಲ್ಲಿದ್ದ ಅಪಾರ ಸಂಖ್ಯೆಯ ಪ್ರಾಣಿ-ಪಕ್ಷಿಗಳು ಬೆಂಕಿಗೆ ಆಹುತಿಯಾಗುತ್ತಿವೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ತಂಡ ದೌಡಾಯಿಸಿ, ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಅಧಿಕಾರಿಗಳಿಗೆ ಸ್ಥಳೀಯರು ಅಗ್ನಿ ದಮನಕ್ಕೆ ಸಾಥ್ ನೀಡುತ್ತಿದ್ದಾರೆ. ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟ ಸಾಧ್ಯವಾಗಿದೆ. ಅಗಾಧವಾದ ಮರ ಗಿಡಗಳು ಗುಡ್ಡದಲ್ಲಿ ಇರುವುದರಿಂದ ಬೆಂಕಿ ನಂದಿಸುವುದು ಅಷ್ಟು ಸುಲಭವಾದ ಕೆಲಸ ಅಲ್ಲ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…