ಬಿಸಿಲಿನ ತಾಪಕ್ಕೆ ಗುಡ್ಡ, ಬೆಟ್ಟ, ಕಾಡು, ಬಯಲು ಎಲ್ಲವು ಒಣಗಿ ನಿಂತಿದೆ. ಕೊಂಚ ಎಚ್ಚರ ತಪ್ಪಿದರೂ ಬೆಂಕಿ ತಗುಲಿದರೆ ಇಡೀ ಪ್ರದೇಶವೇ ಸುಟ್ಟು ಭಸ್ಮವಾಗುತ್ತದೆ. ಈಗಾಗಲೇ ಹಲವು ಕಡೆ ಬೆಂಕಿ ಅವಘಡ ನಡೆದಿದೆ. ಇದೀಗ ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶವೂ ಭಾನುವಾರ ಹೊತ್ತಿ ಉರಿಯಲಾರಂಭಿಸಿದೆ. ಸಂಜೆಯ ವೇಳೆಗೆ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಆಲೇಖಾನ್ ಹೊರಟ್ಟಿ ಗುಡ್ಡಕ್ಕೆ ಯಾರೊ ಅನಾಮಿಕರು ಹಾಕಿದ ಬೆಂಕಿಯಿಂದ ಅರಣ್ಯ ಉರಿಯುತ್ತಿದೆ ಎಂದು ಹೇಳಲಾಗಿದೆ.
ಈ ಗುಡ್ಡ ಮುಂದಕ್ಕೆ ಚಾರ್ಮಾಡಿ ಘಾಟಿಯನ್ನು ಹೊಂದಿಕೊಂಡಿದೆ. ಎತ್ತರ ಪ್ರದೇಶದ ಗುಡ್ಡದಲ್ಲಿ ವಿಪರೀತ ಬೆಂಕಿ ಹೊತ್ತಿ ಉರಿಯುತ್ತಿದೆ. ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗುತ್ತಿದೆ. ಗುಡ್ಡದಲ್ಲಿದ್ದ ಅಪಾರ ಸಂಖ್ಯೆಯ ಪ್ರಾಣಿ-ಪಕ್ಷಿಗಳು ಬೆಂಕಿಗೆ ಆಹುತಿಯಾಗುತ್ತಿವೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ತಂಡ ದೌಡಾಯಿಸಿ, ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಅಧಿಕಾರಿಗಳಿಗೆ ಸ್ಥಳೀಯರು ಅಗ್ನಿ ದಮನಕ್ಕೆ ಸಾಥ್ ನೀಡುತ್ತಿದ್ದಾರೆ. ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟ ಸಾಧ್ಯವಾಗಿದೆ. ಅಗಾಧವಾದ ಮರ ಗಿಡಗಳು ಗುಡ್ಡದಲ್ಲಿ ಇರುವುದರಿಂದ ಬೆಂಕಿ ನಂದಿಸುವುದು ಅಷ್ಟು ಸುಲಭವಾದ ಕೆಲಸ ಅಲ್ಲ.
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.