ಬಿಸಿಲಿನ ತಾಪಕ್ಕೆ ಗುಡ್ಡ, ಬೆಟ್ಟ, ಕಾಡು, ಬಯಲು ಎಲ್ಲವು ಒಣಗಿ ನಿಂತಿದೆ. ಕೊಂಚ ಎಚ್ಚರ ತಪ್ಪಿದರೂ ಬೆಂಕಿ ತಗುಲಿದರೆ ಇಡೀ ಪ್ರದೇಶವೇ ಸುಟ್ಟು ಭಸ್ಮವಾಗುತ್ತದೆ. ಈಗಾಗಲೇ ಹಲವು ಕಡೆ ಬೆಂಕಿ ಅವಘಡ ನಡೆದಿದೆ. ಇದೀಗ ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶವೂ ಭಾನುವಾರ ಹೊತ್ತಿ ಉರಿಯಲಾರಂಭಿಸಿದೆ. ಸಂಜೆಯ ವೇಳೆಗೆ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಆಲೇಖಾನ್ ಹೊರಟ್ಟಿ ಗುಡ್ಡಕ್ಕೆ ಯಾರೊ ಅನಾಮಿಕರು ಹಾಕಿದ ಬೆಂಕಿಯಿಂದ ಅರಣ್ಯ ಉರಿಯುತ್ತಿದೆ ಎಂದು ಹೇಳಲಾಗಿದೆ.
ಈ ಗುಡ್ಡ ಮುಂದಕ್ಕೆ ಚಾರ್ಮಾಡಿ ಘಾಟಿಯನ್ನು ಹೊಂದಿಕೊಂಡಿದೆ. ಎತ್ತರ ಪ್ರದೇಶದ ಗುಡ್ಡದಲ್ಲಿ ವಿಪರೀತ ಬೆಂಕಿ ಹೊತ್ತಿ ಉರಿಯುತ್ತಿದೆ. ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗುತ್ತಿದೆ. ಗುಡ್ಡದಲ್ಲಿದ್ದ ಅಪಾರ ಸಂಖ್ಯೆಯ ಪ್ರಾಣಿ-ಪಕ್ಷಿಗಳು ಬೆಂಕಿಗೆ ಆಹುತಿಯಾಗುತ್ತಿವೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ತಂಡ ದೌಡಾಯಿಸಿ, ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಅಧಿಕಾರಿಗಳಿಗೆ ಸ್ಥಳೀಯರು ಅಗ್ನಿ ದಮನಕ್ಕೆ ಸಾಥ್ ನೀಡುತ್ತಿದ್ದಾರೆ. ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟ ಸಾಧ್ಯವಾಗಿದೆ. ಅಗಾಧವಾದ ಮರ ಗಿಡಗಳು ಗುಡ್ಡದಲ್ಲಿ ಇರುವುದರಿಂದ ಬೆಂಕಿ ನಂದಿಸುವುದು ಅಷ್ಟು ಸುಲಭವಾದ ಕೆಲಸ ಅಲ್ಲ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…