Advertisement
ಸುದ್ದಿಗಳು

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಹರಡಿದ ಕಾಡ್ಗಿಚ್ಚು‌ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

Share

ಬಿಸಿಲಿನ ತಾಪಕ್ಕೆ ಗುಡ್ಡ, ಬೆಟ್ಟ, ಕಾಡು, ಬಯಲು ಎಲ್ಲವು ಒಣಗಿ ನಿಂತಿದೆ.  ಕೊಂಚ ಎಚ್ಚರ ತಪ್ಪಿದರೂ ಬೆಂಕಿ ತಗುಲಿದರೆ ಇಡೀ ಪ್ರದೇಶವೇ ಸುಟ್ಟು ಭಸ್ಮವಾಗುತ್ತದೆ. ಈಗಾಗಲೇ ಹಲವು ಕಡೆ ಬೆಂಕಿ ಅವಘಡ ನಡೆದಿದೆ.  ಇದೀಗ ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶವೂ ಭಾನುವಾರ ಹೊತ್ತಿ ಉರಿಯಲಾರಂಭಿಸಿದೆ. ಸಂಜೆಯ ವೇಳೆಗೆ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಆಲೇಖಾನ್ ಹೊರಟ್ಟಿ ಗುಡ್ಡಕ್ಕೆ ಯಾರೊ ಅನಾಮಿಕರು ಹಾಕಿದ ಬೆಂಕಿಯಿಂದ  ಅರಣ್ಯ ಉರಿಯುತ್ತಿದೆ ಎಂದು ಹೇಳಲಾಗಿದೆ. 

Advertisement
Advertisement

ಈ ಗುಡ್ಡ ಮುಂದಕ್ಕೆ ಚಾರ್ಮಾಡಿ ಘಾಟಿಯನ್ನು ಹೊಂದಿಕೊಂಡಿದೆ. ಎತ್ತರ ಪ್ರದೇಶದ ಗುಡ್ಡದಲ್ಲಿ ವಿಪರೀತ ಬೆಂಕಿ ಹೊತ್ತಿ ಉರಿಯುತ್ತಿದೆ. ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ  ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗುತ್ತಿದೆ. ಗುಡ್ಡದಲ್ಲಿದ್ದ ಅಪಾರ ಸಂಖ್ಯೆಯ ಪ್ರಾಣಿ-ಪಕ್ಷಿಗಳು ಬೆಂಕಿಗೆ ಆಹುತಿಯಾಗುತ್ತಿವೆ ಎಂದು ತಿಳಿದು ಬಂದಿದೆ.

Advertisement

ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ತಂಡ ದೌಡಾಯಿಸಿ, ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಅಧಿಕಾರಿಗಳಿಗೆ ಸ್ಥಳೀಯರು ಅಗ್ನಿ ದಮನಕ್ಕೆ  ಸಾಥ್ ನೀಡುತ್ತಿದ್ದಾರೆ. ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟ ಸಾಧ್ಯವಾಗಿದೆ. ಅಗಾಧವಾದ ಮರ ಗಿಡಗಳು ಗುಡ್ಡದಲ್ಲಿ ಇರುವುದರಿಂದ ಬೆಂಕಿ‌ ನಂದಿಸುವುದು ಅಷ್ಟು ಸುಲಭವಾದ ಕೆಲಸ ಅಲ್ಲ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

4 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

4 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

8 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

8 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

9 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

10 hours ago