ಬಿಸಿಲಿನ ತಾಪಕ್ಕೆ ಗುಡ್ಡ, ಬೆಟ್ಟ, ಕಾಡು, ಬಯಲು ಎಲ್ಲವು ಒಣಗಿ ನಿಂತಿದೆ. ಕೊಂಚ ಎಚ್ಚರ ತಪ್ಪಿದರೂ ಬೆಂಕಿ ತಗುಲಿದರೆ ಇಡೀ ಪ್ರದೇಶವೇ ಸುಟ್ಟು ಭಸ್ಮವಾಗುತ್ತದೆ. ಈಗಾಗಲೇ ಹಲವು ಕಡೆ ಬೆಂಕಿ ಅವಘಡ ನಡೆದಿದೆ. ಇದೀಗ ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶವೂ ಭಾನುವಾರ ಹೊತ್ತಿ ಉರಿಯಲಾರಂಭಿಸಿದೆ. ಸಂಜೆಯ ವೇಳೆಗೆ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಆಲೇಖಾನ್ ಹೊರಟ್ಟಿ ಗುಡ್ಡಕ್ಕೆ ಯಾರೊ ಅನಾಮಿಕರು ಹಾಕಿದ ಬೆಂಕಿಯಿಂದ ಅರಣ್ಯ ಉರಿಯುತ್ತಿದೆ ಎಂದು ಹೇಳಲಾಗಿದೆ.
ಈ ಗುಡ್ಡ ಮುಂದಕ್ಕೆ ಚಾರ್ಮಾಡಿ ಘಾಟಿಯನ್ನು ಹೊಂದಿಕೊಂಡಿದೆ. ಎತ್ತರ ಪ್ರದೇಶದ ಗುಡ್ಡದಲ್ಲಿ ವಿಪರೀತ ಬೆಂಕಿ ಹೊತ್ತಿ ಉರಿಯುತ್ತಿದೆ. ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗುತ್ತಿದೆ. ಗುಡ್ಡದಲ್ಲಿದ್ದ ಅಪಾರ ಸಂಖ್ಯೆಯ ಪ್ರಾಣಿ-ಪಕ್ಷಿಗಳು ಬೆಂಕಿಗೆ ಆಹುತಿಯಾಗುತ್ತಿವೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ತಂಡ ದೌಡಾಯಿಸಿ, ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಅಧಿಕಾರಿಗಳಿಗೆ ಸ್ಥಳೀಯರು ಅಗ್ನಿ ದಮನಕ್ಕೆ ಸಾಥ್ ನೀಡುತ್ತಿದ್ದಾರೆ. ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟ ಸಾಧ್ಯವಾಗಿದೆ. ಅಗಾಧವಾದ ಮರ ಗಿಡಗಳು ಗುಡ್ಡದಲ್ಲಿ ಇರುವುದರಿಂದ ಬೆಂಕಿ ನಂದಿಸುವುದು ಅಷ್ಟು ಸುಲಭವಾದ ಕೆಲಸ ಅಲ್ಲ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…