ಬಿಸಿಲಿನ ತಾಪಕ್ಕೆ ಗುಡ್ಡ, ಬೆಟ್ಟ, ಕಾಡು, ಬಯಲು ಎಲ್ಲವು ಒಣಗಿ ನಿಂತಿದೆ. ಕೊಂಚ ಎಚ್ಚರ ತಪ್ಪಿದರೂ ಬೆಂಕಿ ತಗುಲಿದರೆ ಇಡೀ ಪ್ರದೇಶವೇ ಸುಟ್ಟು ಭಸ್ಮವಾಗುತ್ತದೆ. ಈಗಾಗಲೇ ಹಲವು ಕಡೆ ಬೆಂಕಿ ಅವಘಡ ನಡೆದಿದೆ. ಇದೀಗ ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶವೂ ಭಾನುವಾರ ಹೊತ್ತಿ ಉರಿಯಲಾರಂಭಿಸಿದೆ. ಸಂಜೆಯ ವೇಳೆಗೆ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಆಲೇಖಾನ್ ಹೊರಟ್ಟಿ ಗುಡ್ಡಕ್ಕೆ ಯಾರೊ ಅನಾಮಿಕರು ಹಾಕಿದ ಬೆಂಕಿಯಿಂದ ಅರಣ್ಯ ಉರಿಯುತ್ತಿದೆ ಎಂದು ಹೇಳಲಾಗಿದೆ.
ಈ ಗುಡ್ಡ ಮುಂದಕ್ಕೆ ಚಾರ್ಮಾಡಿ ಘಾಟಿಯನ್ನು ಹೊಂದಿಕೊಂಡಿದೆ. ಎತ್ತರ ಪ್ರದೇಶದ ಗುಡ್ಡದಲ್ಲಿ ವಿಪರೀತ ಬೆಂಕಿ ಹೊತ್ತಿ ಉರಿಯುತ್ತಿದೆ. ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗುತ್ತಿದೆ. ಗುಡ್ಡದಲ್ಲಿದ್ದ ಅಪಾರ ಸಂಖ್ಯೆಯ ಪ್ರಾಣಿ-ಪಕ್ಷಿಗಳು ಬೆಂಕಿಗೆ ಆಹುತಿಯಾಗುತ್ತಿವೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ತಂಡ ದೌಡಾಯಿಸಿ, ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಅಧಿಕಾರಿಗಳಿಗೆ ಸ್ಥಳೀಯರು ಅಗ್ನಿ ದಮನಕ್ಕೆ ಸಾಥ್ ನೀಡುತ್ತಿದ್ದಾರೆ. ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟ ಸಾಧ್ಯವಾಗಿದೆ. ಅಗಾಧವಾದ ಮರ ಗಿಡಗಳು ಗುಡ್ಡದಲ್ಲಿ ಇರುವುದರಿಂದ ಬೆಂಕಿ ನಂದಿಸುವುದು ಅಷ್ಟು ಸುಲಭವಾದ ಕೆಲಸ ಅಲ್ಲ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…